Advertisement
ಅನುಕ್ರಮ

ರಾಮ ನವಮಿ | ರಾಮ ಎಂದರೆ ಸರ್ವಸ್ವ | ರಾಮ ಎಂದರೆ ಆದರ್ಶ |

Share

ನಾವು ಮನಸಾ ಸ್ಮರಿಸುವುದು ರಾಮ ಎಂದೇ. ಬಾಲ್ಯದಲ್ಲಿ ‌ ಕೇಳಿದ ರಾಮ ನಾಮ ಮರೆಯುವುದುಂಟೇ. ದೀಪವಿಲ್ಲದೆ ಕತ್ತಲೆಯಲ್ಲಿ ನೆರಳಿನಾಟಕ್ಕೆ ಹೆದರಿದಾಗ ಅಜ್ಜಿ ಹೇಳಿಕೊಟ್ಟ ಧೈರ್ಯ ಮಂತ್ರ ರಾಮ. ಶಾಲೆಗೆ ಹೋಗುವಾಗ ಗುಡುಗು, ಸಿಡಿಲು, ಗಾಳಿ ಮಳೆ ಬಂದಾಗ ಜಪಿಸಲು ಅಮ್ಮ ಹೇಳಿಕೊಟ್ಟ ಶಕ್ತಿ ಮಂತ್ರ ರಾಮ ನಾಮ. ದೂರದೂರಿನಲಿ ವಿಧ್ಯಾಭ್ಯಾಸಕ್ಕೆ ತೆರಳುವಾಗ ಅಪ್ಪ ಹೇಳಿಕೊಟ್ಟ ಸೂತ್ರವೂ ರಾಮನಾಮವೇ.

ಬದುಕಿನ ಒಂದೊಂದು ಮೆಟ್ಟಿಲು ಹತ್ತುವಾಗಲೂ ಜೊತೆಗಿದ್ದು ಶಕ್ತಿ ನೀಡುವ ಒಂದು ಟ್ಯಾಬೆಲ್ಟ್ ಇದೆಯೆಂದರೆ ಅದು ರಾಮ ನಾಮವೇ. ನಮಗೆ ಅನಿರೀಕ್ಷಿತ ಆಘಾತವಾದಾಗ ಹೇಗೆ ಅಮ್ಮನನ್ನು ನೆನೆಯುತ್ತೇವೆಯೋ ಹಾಗೆ ರಾಮನಾಮವೂ ಜೊತೆಯಾಗುವುದು ಸಹಜವೆಂದರೆ ತಪ್ಪಲ್ಲ. ಅದು ನಮಲ್ಲಿ ರಕ್ತಗತವಾಗಿರುವಂತಹುದು.

ಮಕ್ಕಳು ಬಿದ್ದಾಗ ಸಾಮಾನ್ಯವಾಗಿ ಅಯ್ಯೋ ಎಂಬ ಶಬ್ದ ಬಂದುಬಿಡುತ್ತದೆ. ಹಾಗನ್ನಬಾರದು ರಾಮ ರಾಮ ಅನ್ನು ನೋವೇ ತಿಳಿದು., ಅಪಾಯವೂ ಆಗದು ಎಂಬುದು ಹಿರಿಯರ ಮಾತು. ಎಷ್ಟೋ ಬಾರಿ ನಿಜವೆನಿಸುತ್ತವೆ.

ರಾಮನೆಂದರೆ ನಮಗೆ ಒಂದು ಮೂರ್ತಿಯಲ್ಲ, ಪೂಜಿಸುವ ದೇವನಾಗಿ ಮಾತ್ರ ಉಳಿದಿಲ್ಲ. ರಾಮನೆಂದರೆ ನಮಗೆ ಸರ್ವಸ್ವ. ರಾಮ ಯಾವಾಗಲೂ ನಮ್ಮ ನೈತಿಕತೆಯ ಪ್ರತೀಕ. ರಾಮನವಮಿಯೆಂದರೆ ರಾಮ ಹುಟ್ಟಿದ ದಿನ. ಇದು ಯಾವಾಗಲೂ ಯುಗಾದಿ ಕಳೆದು ಎಂಟನೇಯ ದಿನ ಬರುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದಂದು ಆಚರಿಸಲಾಗುತ್ತದೆ.

ರಾಮನ ಹುಟ್ಟಿದ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ.‌ ರಾಮನ ಬಾಲಲೀಲೆಯಾಗಿರಲಿ, ವಿದ್ಯಾಭ್ಯಾಸದ‌, ಸಂಧರ್ಭವಾಗಿರಲಿ ಹೋರಾಟದ ಬದುಕಾಗಿರಲಿ ಎಲ್ಲವೂ ಜನಸಾಮಾನ್ಯರು ಅನುಭವಿಸುವಂತದ್ದೇ ಆಗಿತ್ತು . ರಾಮ ಮನಸಿಗೆ ಹತ್ತಿರವಾಗುವುದು ಇದೇ ವಿಷಯಕ್ಕೆ. ರಾಮಾಯಣವನ್ನು ಎಲ್ಲಾ ವಯಸ್ಸಿನವರೂ ಓದಬಹುದು. ಹಿರಿಯರು ಯಾವತ್ತೂ ಹೇಳುತ್ತಾರೆ, ರಾಮಾಯಣ ಓದಿ ಕೆಟ್ಟವರಿಲ್ಲ, ಅಲ್ಲಿನ ಪ್ರತಿಯೊಂದು ವಿಷಯಗಳು ಸಾರ್ವಕಾಲಿಕ ಸತ್ಯ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

12 minutes ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

16 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago