Advertisement
ಅನುಕ್ರಮ

ರಾಮ ನವಮಿ | ರಾಮ ಎಂದರೆ ಸರ್ವಸ್ವ | ರಾಮ ಎಂದರೆ ಆದರ್ಶ |

Share

ನಾವು ಮನಸಾ ಸ್ಮರಿಸುವುದು ರಾಮ ಎಂದೇ. ಬಾಲ್ಯದಲ್ಲಿ ‌ ಕೇಳಿದ ರಾಮ ನಾಮ ಮರೆಯುವುದುಂಟೇ. ದೀಪವಿಲ್ಲದೆ ಕತ್ತಲೆಯಲ್ಲಿ ನೆರಳಿನಾಟಕ್ಕೆ ಹೆದರಿದಾಗ ಅಜ್ಜಿ ಹೇಳಿಕೊಟ್ಟ ಧೈರ್ಯ ಮಂತ್ರ ರಾಮ. ಶಾಲೆಗೆ ಹೋಗುವಾಗ ಗುಡುಗು, ಸಿಡಿಲು, ಗಾಳಿ ಮಳೆ ಬಂದಾಗ ಜಪಿಸಲು ಅಮ್ಮ ಹೇಳಿಕೊಟ್ಟ ಶಕ್ತಿ ಮಂತ್ರ ರಾಮ ನಾಮ. ದೂರದೂರಿನಲಿ ವಿಧ್ಯಾಭ್ಯಾಸಕ್ಕೆ ತೆರಳುವಾಗ ಅಪ್ಪ ಹೇಳಿಕೊಟ್ಟ ಸೂತ್ರವೂ ರಾಮನಾಮವೇ.

ಬದುಕಿನ ಒಂದೊಂದು ಮೆಟ್ಟಿಲು ಹತ್ತುವಾಗಲೂ ಜೊತೆಗಿದ್ದು ಶಕ್ತಿ ನೀಡುವ ಒಂದು ಟ್ಯಾಬೆಲ್ಟ್ ಇದೆಯೆಂದರೆ ಅದು ರಾಮ ನಾಮವೇ. ನಮಗೆ ಅನಿರೀಕ್ಷಿತ ಆಘಾತವಾದಾಗ ಹೇಗೆ ಅಮ್ಮನನ್ನು ನೆನೆಯುತ್ತೇವೆಯೋ ಹಾಗೆ ರಾಮನಾಮವೂ ಜೊತೆಯಾಗುವುದು ಸಹಜವೆಂದರೆ ತಪ್ಪಲ್ಲ. ಅದು ನಮಲ್ಲಿ ರಕ್ತಗತವಾಗಿರುವಂತಹುದು.

Advertisement

ಮಕ್ಕಳು ಬಿದ್ದಾಗ ಸಾಮಾನ್ಯವಾಗಿ ಅಯ್ಯೋ ಎಂಬ ಶಬ್ದ ಬಂದುಬಿಡುತ್ತದೆ. ಹಾಗನ್ನಬಾರದು ರಾಮ ರಾಮ ಅನ್ನು ನೋವೇ ತಿಳಿದು., ಅಪಾಯವೂ ಆಗದು ಎಂಬುದು ಹಿರಿಯರ ಮಾತು. ಎಷ್ಟೋ ಬಾರಿ ನಿಜವೆನಿಸುತ್ತವೆ.

ರಾಮನೆಂದರೆ ನಮಗೆ ಒಂದು ಮೂರ್ತಿಯಲ್ಲ, ಪೂಜಿಸುವ ದೇವನಾಗಿ ಮಾತ್ರ ಉಳಿದಿಲ್ಲ. ರಾಮನೆಂದರೆ ನಮಗೆ ಸರ್ವಸ್ವ. ರಾಮ ಯಾವಾಗಲೂ ನಮ್ಮ ನೈತಿಕತೆಯ ಪ್ರತೀಕ. ರಾಮನವಮಿಯೆಂದರೆ ರಾಮ ಹುಟ್ಟಿದ ದಿನ. ಇದು ಯಾವಾಗಲೂ ಯುಗಾದಿ ಕಳೆದು ಎಂಟನೇಯ ದಿನ ಬರುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದಂದು ಆಚರಿಸಲಾಗುತ್ತದೆ.

Advertisement

ರಾಮನ ಹುಟ್ಟಿದ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ.‌ ರಾಮನ ಬಾಲಲೀಲೆಯಾಗಿರಲಿ, ವಿದ್ಯಾಭ್ಯಾಸದ‌, ಸಂಧರ್ಭವಾಗಿರಲಿ ಹೋರಾಟದ ಬದುಕಾಗಿರಲಿ ಎಲ್ಲವೂ ಜನಸಾಮಾನ್ಯರು ಅನುಭವಿಸುವಂತದ್ದೇ ಆಗಿತ್ತು . ರಾಮ ಮನಸಿಗೆ ಹತ್ತಿರವಾಗುವುದು ಇದೇ ವಿಷಯಕ್ಕೆ. ರಾಮಾಯಣವನ್ನು ಎಲ್ಲಾ ವಯಸ್ಸಿನವರೂ ಓದಬಹುದು. ಹಿರಿಯರು ಯಾವತ್ತೂ ಹೇಳುತ್ತಾರೆ, ರಾಮಾಯಣ ಓದಿ ಕೆಟ್ಟವರಿಲ್ಲ, ಅಲ್ಲಿನ ಪ್ರತಿಯೊಂದು ವಿಷಯಗಳು ಸಾರ್ವಕಾಲಿಕ ಸತ್ಯ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

16 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

18 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago