ಮಹಿಳೆಯ ಮಾತೃತ್ವವನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.
ಜಗತ್ತಿನಲ್ಲಿ ಪುರುಷ ಏನು ಬೇಕಾದರೂ ಆಗಬಹುದು; ಆದರೆ ಮಾತೆ ಆಗಲಾರ. ಆದ್ದರಿಂದ ಪುರುಷ ಸಾಧಿಸುವ ಯಾವುದೇ ಯಶಸ್ಸಿನ ಕೀರ್ತಿ ಆತನನ್ನು ಹೊತ್ತು ಹೆತ್ತು ಸಲಹಿದ ಮಾತೆಗೆ ಸಲ್ಲಬೇಕು ಎಂದು ಹೇಳಿದರು. ಆದರೆ ಮಾತೃಶಕ್ತಿಯ ಸ್ವರೂಪ ಅಡಿಗಲ್ಲಿನಂತೆ. ತಾಯಿಯ ಋಣ ಯಾರೂ ತೀರಿಸಲಾಗದು. ಅದು ಅಗೋಚರವಾಗಿರುತ್ತದೆ. ತಾಯಿ ಎಲೆಮರೆಯ ಕಾಯಿ. ಆದಿಶಂಕರರು ಮಾತೆಯರಿಗೆ ನೀಡಿದ ಮಹತ್ವವನ್ನು ಮಾತೃಪಂಚಕದಲ್ಲಿ ಬಣ್ಣಿಸಿದ್ದಾರೆ. ತಾಯಿಯ ಹಾರೈಕೆಯ ಫಲವಾಗಿ ಮನುಷ್ಯ ಎತ್ತರಕ್ಕೆ ಬೆಳೆಯುತ್ತಾನೆ. ಆದರೆ ಪ್ರತಿಯಾಗಿ ಒಣಗಿದ ಅಕ್ಕಿಕಾಳು ಹಾಕುವ ಸ್ಥಿತಿ ನನ್ನದು ಎಂದು ಶಂಕರರು ವೇದನೆಯಿಂದ ಹೇಳಿದ್ದಾರೆ ಎಂದು ವಿವರಿಸಿದರು.ಸ್ತ್ರೀಯರಿಗೆ ಬಾಹುಬಲ ಇಲ್ಲದಿದ್ದರೂ ಭಾವ ಬಲ ಇದೆ. ಸ್ತ್ರೀಯರಿಗೆ ಕೋಮಲತ್ವ ಇದೆ. ಅದಕ್ಕೆ ಧಕ್ಕೆ ಬರಬಾರದು. ಯಾವುದೇ ವಯೋಮಾನದ ಮಹಿಳೆಯರನ್ನು ಗೌರವಿಸುವುದು ಸಮಾಜದ ಕರ್ತವ್ಯ ಎಂದರು.ಯಾವ ಮಕ್ಕಳೂ ಮಾತೆಯ ಬಗ್ಗೆ ಅವಜ್ಞೆ ಮಾಡಬಾರದು. ಮಾತೆಯರಿಗೆ ಕ್ಲೇಶ ಕೊಡಬಾರದು ಎಂದು ಸೂಚಿಸಿದರು.
ಮಾತೃ ಸಮಾವೇಶ ಅಂಗವಾಗಿ ಛಾತ್ರಭಿಕ್ಷೆ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಇಲ್ಲಿ ಕಲಿಯುವ ವಟುಗಳಿಗೆ ಮಾತೆಯನ್ನು ಭಿಕ್ಷಾಸೇವೆ ನೆರವೇರಿಸಿದರು. ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಕಾರ್ಯದರ್ಶಿ ದೇವಿಕಾ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…