ಮಹಿಳೆಯ ಮಾತೃತ್ವವನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.
ಜಗತ್ತಿನಲ್ಲಿ ಪುರುಷ ಏನು ಬೇಕಾದರೂ ಆಗಬಹುದು; ಆದರೆ ಮಾತೆ ಆಗಲಾರ. ಆದ್ದರಿಂದ ಪುರುಷ ಸಾಧಿಸುವ ಯಾವುದೇ ಯಶಸ್ಸಿನ ಕೀರ್ತಿ ಆತನನ್ನು ಹೊತ್ತು ಹೆತ್ತು ಸಲಹಿದ ಮಾತೆಗೆ ಸಲ್ಲಬೇಕು ಎಂದು ಹೇಳಿದರು. ಆದರೆ ಮಾತೃಶಕ್ತಿಯ ಸ್ವರೂಪ ಅಡಿಗಲ್ಲಿನಂತೆ. ತಾಯಿಯ ಋಣ ಯಾರೂ ತೀರಿಸಲಾಗದು. ಅದು ಅಗೋಚರವಾಗಿರುತ್ತದೆ. ತಾಯಿ ಎಲೆಮರೆಯ ಕಾಯಿ. ಆದಿಶಂಕರರು ಮಾತೆಯರಿಗೆ ನೀಡಿದ ಮಹತ್ವವನ್ನು ಮಾತೃಪಂಚಕದಲ್ಲಿ ಬಣ್ಣಿಸಿದ್ದಾರೆ. ತಾಯಿಯ ಹಾರೈಕೆಯ ಫಲವಾಗಿ ಮನುಷ್ಯ ಎತ್ತರಕ್ಕೆ ಬೆಳೆಯುತ್ತಾನೆ. ಆದರೆ ಪ್ರತಿಯಾಗಿ ಒಣಗಿದ ಅಕ್ಕಿಕಾಳು ಹಾಕುವ ಸ್ಥಿತಿ ನನ್ನದು ಎಂದು ಶಂಕರರು ವೇದನೆಯಿಂದ ಹೇಳಿದ್ದಾರೆ ಎಂದು ವಿವರಿಸಿದರು.ಸ್ತ್ರೀಯರಿಗೆ ಬಾಹುಬಲ ಇಲ್ಲದಿದ್ದರೂ ಭಾವ ಬಲ ಇದೆ. ಸ್ತ್ರೀಯರಿಗೆ ಕೋಮಲತ್ವ ಇದೆ. ಅದಕ್ಕೆ ಧಕ್ಕೆ ಬರಬಾರದು. ಯಾವುದೇ ವಯೋಮಾನದ ಮಹಿಳೆಯರನ್ನು ಗೌರವಿಸುವುದು ಸಮಾಜದ ಕರ್ತವ್ಯ ಎಂದರು.ಯಾವ ಮಕ್ಕಳೂ ಮಾತೆಯ ಬಗ್ಗೆ ಅವಜ್ಞೆ ಮಾಡಬಾರದು. ಮಾತೆಯರಿಗೆ ಕ್ಲೇಶ ಕೊಡಬಾರದು ಎಂದು ಸೂಚಿಸಿದರು.
ಮಾತೃ ಸಮಾವೇಶ ಅಂಗವಾಗಿ ಛಾತ್ರಭಿಕ್ಷೆ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಇಲ್ಲಿ ಕಲಿಯುವ ವಟುಗಳಿಗೆ ಮಾತೆಯನ್ನು ಭಿಕ್ಷಾಸೇವೆ ನೆರವೇರಿಸಿದರು. ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಕಾರ್ಯದರ್ಶಿ ದೇವಿಕಾ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ…
ಅಡಿಕೆ ರೋಗಗಳಿಗೆ “ಬಯೋ” ಔಷಧಿಗಳ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆತಂಕ ಹೆಚ್ಚುತ್ತಿದೆ.…
ಅಡಿಕೆ ಆಧಾರಿತ ಅಗರೋಫಾರೆಸ್ಟ್ರಿ ವ್ಯವಸ್ಥೆಯಲ್ಲಿ ಲೆಮನ್ ಗ್ರಾಸ್ ವಿವಿಧ ಜಾತಿಗಳ ಬೆಳವಣಿಗೆ ಮತ್ತು…
ಕರ್ನಾಟಕ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಕಂಡುಬರುತ್ತಿವೆ.…
ಕರ್ನಾಟಕದ ಸುಳ್ಯ, ಸುಬ್ರಹ್ಮಣ್ಯ ಹಾಗೂ ಕೊಡಗು ಭಾಗಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಾಧ್ಯತೆ…
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…