Advertisement
ಧಾರ್ಮಿಕ

ಮಾತೃತ್ವ ಗೌರವಿಸುವುದು ಸಮಾಜದ ಕರ್ತವ್ಯ: ರಾಘವೇಶ್ವರ ಶ್ರೀ

Share

ಮಹಿಳೆಯ ಮಾತೃತ್ವವನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಮಾತೃ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ಮಹಿಳೆಯಾಗಿ ಹುಟ್ಟುವಾಗಲೇ ಆಕೆ ದೇವಿಯ ಸ್ವರೂಪವಾಗಿ ಹುಟ್ಟುತ್ತಾಳೆ. ಹೆಣ್ಣನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ. ಅದು ಅತ್ಯಂತ ಪಾಪದ ಕಾರ್ಯ. ಆಕೆ ಕಣ್ಣೀರು ಇಟ್ಟರೆ ಅದು ಶಾಪ. ಮಹಿಳೆ ಸಂತೋಷವಾಗಿದ್ದರೆ ಮಾತ್ರ ಶ್ರೇಯಸ್ಸು ಎಂದು ಬಣ್ಣಿಸಿದರು.

ಜಗತ್ತಿನಲ್ಲಿ ಪುರುಷ ಏನು ಬೇಕಾದರೂ ಆಗಬಹುದು; ಆದರೆ ಮಾತೆ ಆಗಲಾರ. ಆದ್ದರಿಂದ ಪುರುಷ ಸಾಧಿಸುವ ಯಾವುದೇ ಯಶಸ್ಸಿನ ಕೀರ್ತಿ ಆತನನ್ನು ಹೊತ್ತು ಹೆತ್ತು ಸಲಹಿದ ಮಾತೆಗೆ ಸಲ್ಲಬೇಕು ಎಂದು ಹೇಳಿದರು. ಆದರೆ ಮಾತೃಶಕ್ತಿಯ ಸ್ವರೂಪ ಅಡಿಗಲ್ಲಿನಂತೆ. ತಾಯಿಯ ಋಣ ಯಾರೂ ತೀರಿಸಲಾಗದು. ಅದು ಅಗೋಚರವಾಗಿರುತ್ತದೆ. ತಾಯಿ ಎಲೆಮರೆಯ ಕಾಯಿ. ಆದಿಶಂಕರರು ಮಾತೆಯರಿಗೆ ನೀಡಿದ ಮಹತ್ವವನ್ನು ಮಾತೃಪಂಚಕದಲ್ಲಿ ಬಣ್ಣಿಸಿದ್ದಾರೆ. ತಾಯಿಯ ಹಾರೈಕೆಯ ಫಲವಾಗಿ ಮನುಷ್ಯ ಎತ್ತರಕ್ಕೆ ಬೆಳೆಯುತ್ತಾನೆ. ಆದರೆ ಪ್ರತಿಯಾಗಿ ಒಣಗಿದ ಅಕ್ಕಿಕಾಳು ಹಾಕುವ ಸ್ಥಿತಿ ನನ್ನದು ಎಂದು ಶಂಕರರು ವೇದನೆಯಿಂದ ಹೇಳಿದ್ದಾರೆ ಎಂದು ವಿವರಿಸಿದರು.ಸ್ತ್ರೀಯರಿಗೆ ಬಾಹುಬಲ ಇಲ್ಲದಿದ್ದರೂ ಭಾವ ಬಲ ಇದೆ. ಸ್ತ್ರೀಯರಿಗೆ ಕೋಮಲತ್ವ ಇದೆ. ಅದಕ್ಕೆ ಧಕ್ಕೆ ಬರಬಾರದು. ಯಾವುದೇ ವಯೋಮಾನದ ಮಹಿಳೆಯರನ್ನು ಗೌರವಿಸುವುದು ಸಮಾಜದ ಕರ್ತವ್ಯ ಎಂದರು.ಯಾವ ಮಕ್ಕಳೂ ಮಾತೆಯ ಬಗ್ಗೆ ಅವಜ್ಞೆ ಮಾಡಬಾರದು. ಮಾತೆಯರಿಗೆ ಕ್ಲೇಶ ಕೊಡಬಾರದು ಎಂದು ಸೂಚಿಸಿದರು.

ಮಾತೃ ಸಮಾವೇಶ ಅಂಗವಾಗಿ ಛಾತ್ರಭಿಕ್ಷೆ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಇಲ್ಲಿ ಕಲಿಯುವ ವಟುಗಳಿಗೆ ಮಾತೆಯನ್ನು ಭಿಕ್ಷಾಸೇವೆ ನೆರವೇರಿಸಿದರು. ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಕಾರ್ಯದರ್ಶಿ ದೇವಿಕಾ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

12 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago