ಸುದ್ದಿಗಳು

ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ಕೋರಿದ್ದ ಪಿಐಎಲ್ ಹೈಕೋರ್ಟ್‍ನಲ್ಲಿ ವಜಾ |

Share

ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಮತ್ತು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಪೀಠದಿಂದ ಕೆಳಗಿಳಿಯಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಗುರುವಾರ ವಜಾ ಮಾಡಿದೆ.

Advertisement

ಈ ಅರ್ಜಿ ಸಮರ್ಥನೀಯವಲ್ಲ ಎಂದು ಅಭಿಪ್ರಾಯಪಟ್ಟ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾ ಮಾಡಿದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠದಿಂದ ಇಳಿಯಲು ಆದೇಶ ನೀಡಬೇಕು, ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು, ಕರ್ನಾಟಕದ ಎಲ್ಲಾ ಮಠಗಳ ಆಡಳಿತ ನಿಯಂತ್ರಕ್ಕೆ ಒಂದು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಮಠದಲ್ಲಿ ಸಾಕಷ್ಟು ಆರ್ಥಿಕ ಅವ್ಯವಹಾರ ನಡೆಯುತ್ತಿದೆ ಎಂದು ಅರ್ಜಿದಾರರು ದೂರಿದ್ದರೂ, ಯಾವುದೇ ದಾಖಲಾತಿಗಳನ್ನು ನೀಡಿರಲಿಲ್ಲ.

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಯಾವುದೇ ಕಾರಣಕ್ಕೂ ನ್ಯಾಯಾಲಯದಲ್ಲಿ ಪರಿಗಣಿಸಲ್ಪಡ ತಕ್ಕದ್ದಲ್ಲ ಎಂದು ಮಠದ ಕಡೆಯಿಂದ ಆಕ್ಷೇಪಣೆ ಸಲ್ಲಿಸಲಾಗಿತ್ತು. ಜೊತೆಗೆ ನ್ಯಾಯಾಲಯವು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅರ್ಜಿದಾರರು ಮನವಿ ಸಲ್ಲಿಸಿದರೆ ಅದನ್ನು ಕಾನೂನಾತ್ಮಕವಾಗಿ ಪರಿಗಣಿಸುವಂತೆ ಮಾಡಿದ್ದ ಕೋರಿಕೆಯ ಆದೇಶವನ್ನು ಹಿಂಪಡೆಯುವಂತೆಯೂ ಅರ್ಜಿಯನ್ನು ಸಲ್ಲಿಸಲಾಗಿತ್ತು. 2016 ರಲ್ಲಿ ಸಲ್ಲಿಸಿದ್ದ ಈ ಅರ್ಜಿಯನ್ನು ರಾಜ್ಯ ಹೈಕೋರ್ಟ್ 2019 ರಲ್ಲಿ ತಿರಸ್ಕರಿಸಿ ಆದೇಶಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಮಠ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಮರ್ಥನೀಯತೆಯನ್ನು ಪರಿಶೀಲಿಸುವಂತೆ ಮತ್ತೆ ಹೈಕೋರ್ಟ್‍ಗೆ ಸೂಚನೆ ನೀಡಿತ್ತು.
ಅರ್ಜಿದಾರರ ಹಾಗೂ ಶ್ರೀಮಠದ ವಾದವನ್ನು ಆಲಿಸಿದ ನ್ಯಾಯಪೀಠ, ಅರ್ಜಿ ಸಮರ್ಥನೀಯವಲ್ಲ ಎಂಬ ಶ್ರೀಮಠದ ವಾದವನ್ನು ಎತ್ತಿಹಿಡಿದು ಅರ್ಜಿ ವಜಾಗೊಳಿಸಿತು. ಹಿರಿಯ ವಕೀಲ ಮನಮೋಹನ್ ಅವರು ಶ್ರೀಮಠದ ಪರ ವಾದ ಮಂಡಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

1 hour ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

8 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

9 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

12 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 day ago