Advertisement
ಸುದ್ದಿಗಳು

ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ಕೋರಿದ್ದ ಪಿಐಎಲ್ ಹೈಕೋರ್ಟ್‍ನಲ್ಲಿ ವಜಾ |

Share

ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಮತ್ತು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಪೀಠದಿಂದ ಕೆಳಗಿಳಿಯಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಗುರುವಾರ ವಜಾ ಮಾಡಿದೆ.

ಈ ಅರ್ಜಿ ಸಮರ್ಥನೀಯವಲ್ಲ ಎಂದು ಅಭಿಪ್ರಾಯಪಟ್ಟ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾ ಮಾಡಿದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠದಿಂದ ಇಳಿಯಲು ಆದೇಶ ನೀಡಬೇಕು, ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು, ಕರ್ನಾಟಕದ ಎಲ್ಲಾ ಮಠಗಳ ಆಡಳಿತ ನಿಯಂತ್ರಕ್ಕೆ ಒಂದು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಮಠದಲ್ಲಿ ಸಾಕಷ್ಟು ಆರ್ಥಿಕ ಅವ್ಯವಹಾರ ನಡೆಯುತ್ತಿದೆ ಎಂದು ಅರ್ಜಿದಾರರು ದೂರಿದ್ದರೂ, ಯಾವುದೇ ದಾಖಲಾತಿಗಳನ್ನು ನೀಡಿರಲಿಲ್ಲ.

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಯಾವುದೇ ಕಾರಣಕ್ಕೂ ನ್ಯಾಯಾಲಯದಲ್ಲಿ ಪರಿಗಣಿಸಲ್ಪಡ ತಕ್ಕದ್ದಲ್ಲ ಎಂದು ಮಠದ ಕಡೆಯಿಂದ ಆಕ್ಷೇಪಣೆ ಸಲ್ಲಿಸಲಾಗಿತ್ತು. ಜೊತೆಗೆ ನ್ಯಾಯಾಲಯವು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅರ್ಜಿದಾರರು ಮನವಿ ಸಲ್ಲಿಸಿದರೆ ಅದನ್ನು ಕಾನೂನಾತ್ಮಕವಾಗಿ ಪರಿಗಣಿಸುವಂತೆ ಮಾಡಿದ್ದ ಕೋರಿಕೆಯ ಆದೇಶವನ್ನು ಹಿಂಪಡೆಯುವಂತೆಯೂ ಅರ್ಜಿಯನ್ನು ಸಲ್ಲಿಸಲಾಗಿತ್ತು. 2016 ರಲ್ಲಿ ಸಲ್ಲಿಸಿದ್ದ ಈ ಅರ್ಜಿಯನ್ನು ರಾಜ್ಯ ಹೈಕೋರ್ಟ್ 2019 ರಲ್ಲಿ ತಿರಸ್ಕರಿಸಿ ಆದೇಶಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಮಠ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಮರ್ಥನೀಯತೆಯನ್ನು ಪರಿಶೀಲಿಸುವಂತೆ ಮತ್ತೆ ಹೈಕೋರ್ಟ್‍ಗೆ ಸೂಚನೆ ನೀಡಿತ್ತು.
ಅರ್ಜಿದಾರರ ಹಾಗೂ ಶ್ರೀಮಠದ ವಾದವನ್ನು ಆಲಿಸಿದ ನ್ಯಾಯಪೀಠ, ಅರ್ಜಿ ಸಮರ್ಥನೀಯವಲ್ಲ ಎಂಬ ಶ್ರೀಮಠದ ವಾದವನ್ನು ಎತ್ತಿಹಿಡಿದು ಅರ್ಜಿ ವಜಾಗೊಳಿಸಿತು. ಹಿರಿಯ ವಕೀಲ ಮನಮೋಹನ್ ಅವರು ಶ್ರೀಮಠದ ಪರ ವಾದ ಮಂಡಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

4 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

15 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

20 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

21 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

23 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

23 hours ago