ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮಥ್ರ್ಯ, ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಅವರು ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, ಸಿಟ್ಟು ನಮ್ಮ ವಿವೇಕವನ್ನು ಹಾಳು ಮಾಡುತ್ತದೆ. ಸಿಟ್ಟು ಶಿವನ ಸೃಷ್ಟಿ. ಅದು ನಮ್ಮ ಕೈಯಲ್ಲಿದ್ದರೆ ಗುಣ. ಆದರೆ ಸಿಟ್ಟಿನ ಕೈಯಲ್ಲಿ ನಾವಿದ್ದರೆ ಅದು ದೋಷವಾಗುತ್ತದೆ. ರಾಮ ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾದಾಗ ಒಂದು ಯೋಜನದಷ್ಟು ಹಿಂದೆ ಸರಿದು ಸಮುದ್ರರಾಜ ಎದ್ದು ಬಂದಾಗ, ರಾಮನ ಸಿಟ್ಟಿನ ನಡುವೆಯೂ ವಿವೇಕ, ದಯೆ, ಕಾರುಣ್ಯ ಪ್ರಕಟವಾಯಿತು ಎಂದು ಬಣ್ಣಿಸಿದರು.
ರಾಮನ ಮಹತ್ಕಾರ್ಯಕ್ಕಾಗಿ ಸಮುದ್ರ ತನ್ನ ಸಹಜ ಸ್ವಭಾವವಾದ ಅಗಾಧತೆಯನ್ನೂ ಕೈಬಿಡುವಂತಾಗುತ್ತದೆ. ಶರಣಾಗತರ ಪರಿಪಾಲನೆ ರಾಮನ ಧರ್ಮ. ಇದರಿಂದ ಗುರಿ ಇಟ್ಟ ಬ್ರಹ್ಮಾಸ್ತ್ರವನ್ನೂ ಸಮುದ್ರನ ಮೇಲೆ ಪ್ರಯೋಗಿಸದೇ ಸಮುದ್ರರಾಜನ ಮನವಿಯಂತೆ ದಸ್ವಿಗಳ ಮೇಲೆ ಪ್ರಯೋಗಿಸಿದ್ದು, ರಾಮನ ಕ್ಷಮಾಗುಣಕ್ಕೆ ಸಾಕ್ಷಿ ಎಂದು ಹೇಳಿದರು. ಸಜ್ಜನರ ಸಮಾಧಾನ, ಕ್ಷಮೆ, ಸರಳತೆ, ಹಿತವಚನ ದುಷ್ಟರ ಮುಂದೆ ಅಸಾಮಥ್ರ್ಯ, ದೌರ್ಲಬ್ಯ ಎನಿಸಿಕೊಳ್ಳುತ್ತದೆ. ಒಳ್ಳೆಯತನಕ್ಕೆ ಲೋಕ ಬೆಲೆ ಕೊಡುವುದಿಲ್ಲ. ಸಾಮ, ದಾನ, ಬೇಧ, ದಂಡದಲ್ಲಿ ದಂಡವೇ ಒಳ್ಳೆಯದು ಎಂದು ಕೆಲವೊಮ್ಮೆ ದೇವರಿಗೂ ಅನಿಸುತ್ತದೆ ಎಂದು ಸಮುದ್ರರಾಜನ ಮೇಲೆ ರಾಮನಿಗೆ ಕೋಪ ಪ್ರಕಟವಾದ ಸಂದರ್ಭವನ್ನು ಉದಾಹರಿಸಿದರು. ಸಾಗರದ ಉಪಾಸನೆ ಮಾಡಿ ಸಾಮದಿಂದ ಲಂಕೆಗೆ ದಾರಿ ಕೊಡುವಂತೆ ಮನವಿ ಮಾಡೋಣ ಎನ್ನುವುದು ವಿಭೀಷಣನ ಸಲಹೆ. ಅದರಂತೆ ದರ್ಬೆಯಲ್ಲಿ ಪವಡಿಸಿದ ಪ್ರಭು ರಾಮಚಂದ್ರ ಉಪಾಸನೆ ಮಾಡುವ ಜಾಗೃತ ಸ್ಥಿತಿಯಲ್ಲಿದ್ದಾನೆ. ಸಾಗರ ತರಣ ಅಥವಾ ಇಲ್ಲಿಯೇ ಮರಣ ಎಂಬ ದೃಢಸಂಕಲ್ಪದಿಂದ ಶ್ರೀರಾಮ ಪವಡಿಸಿದ್ದ. ಒಂದೇ ಗುರಿ, ಒಂದೇ ಸಂಕಲ್ಪ ಎನ್ನುವುದು ರಾಮನ ವಿಶೇಷ. ಸಂಪೂರ್ಣ ಮನಸ್ಸು ಶರೀರವನ್ನು ಸಂಯಮದಿಂದ ಇರಿಸಿ ಪವಡಿಸಿದ. ಮೂರು ರಾತ್ರಿ ಹೀಗೆಯೇ ಕಳೆಯಿತು. ಆದರೂ ಸಮುದ್ರ ಮಂದ ಬುದ್ಧಿಯಿಂದಾಗಿ ದರ್ಶನ ನೀಡಲಿಲ್ಲ ಎಂದು ಕಥಾ ಸಾರ ವಿವರಿಸಿದರು. ಆತ್ಮಪ್ರಶಂಸೆ ಮಾಡಿಕೊಳ್ಳುವುದು ಲೋಕದಲ್ಲಿ ಕೆಲವರ ಚಪಲತೆ. ದುಷ್ಟರು, ದೃಷ್ಟರಿಗೆ ಲೋಕ ಮರ್ಯಾದೆ ನೀಡುತ್ತದೆ.ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…