ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟವಾದ್ದು ಏಕೆ ?

January 3, 2022
9:35 PM

ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ  ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್‌ ಪಕ್ಷವನ್ನು ಛೇಡಿಸಿದರು.

ಇದಕ್ಕೆ  ಸಿಟ್ಟಾದ ಡಿ.ಕೆ ಸುರೇಶ್,  ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror