ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷವನ್ನು ಛೇಡಿಸಿದರು.
ಇದಕ್ಕೆ ಸಿಟ್ಟಾದ ಡಿ.ಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…