ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷವನ್ನು ಛೇಡಿಸಿದರು.
ಇದಕ್ಕೆ ಸಿಟ್ಟಾದ ಡಿ.ಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…