ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷವನ್ನು ಛೇಡಿಸಿದರು.
ಇದಕ್ಕೆ ಸಿಟ್ಟಾದ ಡಿ.ಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…