ರಾಮಮಂದಿರ ಉದ್ಘಾಟನೆಯಂದು ಮನೆ ಮನೆಗಳಲ್ಲಿ ಹಾರಾಡಲಿದೆ ರಾಮನ ಧ್ವಜ | ಧಾರಾವಾಡದಲ್ಲಿ ತಯಾರಾಗುತ್ತಿದೆ 3 ಲಕ್ಷ ರಾಮ ಧ್ವಜ |

January 12, 2024
12:14 PM

ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ (Ram Flag) ಹಾರಾಡಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ (Dharawada) ರಾಮನ ಧ್ವಜದ ತಯಾರಿ‌ ಜೋರಾಗಿ ನಡೆಯುತ್ತಿದೆ.

ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ 15 ದಿನಗಳಿಂದ ಈ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ. ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್‌ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.

4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್‌ವರೆಗೆ ಧ್ವಜ ಇವೆ.  5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ.‌ ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಹಗಲು ಕೆಲಸ ಮಾಡಿದರೆ, ಪುರುಷರು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಒಬ್ಬರು 2 ಸಾವಿರಕ್ಕೂ ಹೆಚ್ಚು ಧ್ವಜ ತಯಾರಿ‌ ಮಾಡುತ್ತಿದ್ದಾರೆ. ಅಯೋಧ್ಯೆ ಕಾರ್ಯಕ್ರಮದಿಂದಾಗಿ ಎಷ್ಟೋ ಬಡವರಿಗೆ ಈಗ ಕೆಲಸ ಸಿಕ್ಕಂತಾಗಿದೆ.

  • ಅಂತರ್ಜಾಲ ಮಾಹಿತಿ

Rama flag will be hoisted in the houses of devotees during the Sri Rama Pratistha program in Ayodhya. Preparations for this are going on in Dharwad.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror