MIRROR FOCUS

ರಾಮಮಂದಿರ ಉದ್ಘಾಟನೆಯಂದು ಮನೆ ಮನೆಗಳಲ್ಲಿ ಹಾರಾಡಲಿದೆ ರಾಮನ ಧ್ವಜ | ಧಾರಾವಾಡದಲ್ಲಿ ತಯಾರಾಗುತ್ತಿದೆ 3 ಲಕ್ಷ ರಾಮ ಧ್ವಜ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ (Ram Flag) ಹಾರಾಡಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ (Dharawada) ರಾಮನ ಧ್ವಜದ ತಯಾರಿ‌ ಜೋರಾಗಿ ನಡೆಯುತ್ತಿದೆ.

Advertisement
Advertisement

ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ 15 ದಿನಗಳಿಂದ ಈ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ. ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್‌ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.

4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್‌ವರೆಗೆ ಧ್ವಜ ಇವೆ.  5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ.‌ ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಹಗಲು ಕೆಲಸ ಮಾಡಿದರೆ, ಪುರುಷರು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಒಬ್ಬರು 2 ಸಾವಿರಕ್ಕೂ ಹೆಚ್ಚು ಧ್ವಜ ತಯಾರಿ‌ ಮಾಡುತ್ತಿದ್ದಾರೆ. ಅಯೋಧ್ಯೆ ಕಾರ್ಯಕ್ರಮದಿಂದಾಗಿ ಎಷ್ಟೋ ಬಡವರಿಗೆ ಈಗ ಕೆಲಸ ಸಿಕ್ಕಂತಾಗಿದೆ.

  • ಅಂತರ್ಜಾಲ ಮಾಹಿತಿ

Rama flag will be hoisted in the houses of devotees during the Sri Rama Pratistha program in Ayodhya. Preparations for this are going on in Dharwad.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

8 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

9 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

10 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

10 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

10 hours ago