ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ (Ram Flag) ಹಾರಾಡಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ (Dharawada) ರಾಮನ ಧ್ವಜದ ತಯಾರಿ ಜೋರಾಗಿ ನಡೆಯುತ್ತಿದೆ.
ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್ ಬಂದಿದೆ. ಕಳೆದ 15 ದಿನಗಳಿಂದ ಈ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ. ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.
4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್ವರೆಗೆ ಧ್ವಜ ಇವೆ. 5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ. ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಹಗಲು ಕೆಲಸ ಮಾಡಿದರೆ, ಪುರುಷರು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಒಬ್ಬರು 2 ಸಾವಿರಕ್ಕೂ ಹೆಚ್ಚು ಧ್ವಜ ತಯಾರಿ ಮಾಡುತ್ತಿದ್ದಾರೆ. ಅಯೋಧ್ಯೆ ಕಾರ್ಯಕ್ರಮದಿಂದಾಗಿ ಎಷ್ಟೋ ಬಡವರಿಗೆ ಈಗ ಕೆಲಸ ಸಿಕ್ಕಂತಾಗಿದೆ.
Rama flag will be hoisted in the houses of devotees during the Sri Rama Pratistha program in Ayodhya. Preparations for this are going on in Dharwad.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…