ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ (Ram Flag) ಹಾರಾಡಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ (Dharawada) ರಾಮನ ಧ್ವಜದ ತಯಾರಿ ಜೋರಾಗಿ ನಡೆಯುತ್ತಿದೆ.
ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್ ಬಂದಿದೆ. ಕಳೆದ 15 ದಿನಗಳಿಂದ ಈ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ. ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.
4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್ವರೆಗೆ ಧ್ವಜ ಇವೆ. 5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ. ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಹಗಲು ಕೆಲಸ ಮಾಡಿದರೆ, ಪುರುಷರು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಒಬ್ಬರು 2 ಸಾವಿರಕ್ಕೂ ಹೆಚ್ಚು ಧ್ವಜ ತಯಾರಿ ಮಾಡುತ್ತಿದ್ದಾರೆ. ಅಯೋಧ್ಯೆ ಕಾರ್ಯಕ್ರಮದಿಂದಾಗಿ ಎಷ್ಟೋ ಬಡವರಿಗೆ ಈಗ ಕೆಲಸ ಸಿಕ್ಕಂತಾಗಿದೆ.
Rama flag will be hoisted in the houses of devotees during the Sri Rama Pratistha program in Ayodhya. Preparations for this are going on in Dharwad.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…