Advertisement
MIRROR FOCUS

ರಾಮಮಂದಿರ ಉದ್ಘಾಟನೆಯಂದು ಮನೆ ಮನೆಗಳಲ್ಲಿ ಹಾರಾಡಲಿದೆ ರಾಮನ ಧ್ವಜ | ಧಾರಾವಾಡದಲ್ಲಿ ತಯಾರಾಗುತ್ತಿದೆ 3 ಲಕ್ಷ ರಾಮ ಧ್ವಜ |

Share

ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ (Ram Flag) ಹಾರಾಡಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ (Dharawada) ರಾಮನ ಧ್ವಜದ ತಯಾರಿ‌ ಜೋರಾಗಿ ನಡೆಯುತ್ತಿದೆ.

Advertisement

ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ 15 ದಿನಗಳಿಂದ ಈ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ. ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್‌ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.

4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್‌ವರೆಗೆ ಧ್ವಜ ಇವೆ.  5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ.‌ ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಹಗಲು ಕೆಲಸ ಮಾಡಿದರೆ, ಪುರುಷರು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಒಬ್ಬರು 2 ಸಾವಿರಕ್ಕೂ ಹೆಚ್ಚು ಧ್ವಜ ತಯಾರಿ‌ ಮಾಡುತ್ತಿದ್ದಾರೆ. ಅಯೋಧ್ಯೆ ಕಾರ್ಯಕ್ರಮದಿಂದಾಗಿ ಎಷ್ಟೋ ಬಡವರಿಗೆ ಈಗ ಕೆಲಸ ಸಿಕ್ಕಂತಾಗಿದೆ.

  • ಅಂತರ್ಜಾಲ ಮಾಹಿತಿ

Rama flag will be hoisted in the houses of devotees during the Sri Rama Pratistha program in Ayodhya. Preparations for this are going on in Dharwad.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

4 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

4 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

4 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

4 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago