ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ (Ram Flag) ಹಾರಾಡಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ (Dharawada) ರಾಮನ ಧ್ವಜದ ತಯಾರಿ ಜೋರಾಗಿ ನಡೆಯುತ್ತಿದೆ.
ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್ ಬಂದಿದೆ. ಕಳೆದ 15 ದಿನಗಳಿಂದ ಈ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ. ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.
4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್ವರೆಗೆ ಧ್ವಜ ಇವೆ. 5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ. ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಹಗಲು ಕೆಲಸ ಮಾಡಿದರೆ, ಪುರುಷರು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಒಬ್ಬರು 2 ಸಾವಿರಕ್ಕೂ ಹೆಚ್ಚು ಧ್ವಜ ತಯಾರಿ ಮಾಡುತ್ತಿದ್ದಾರೆ. ಅಯೋಧ್ಯೆ ಕಾರ್ಯಕ್ರಮದಿಂದಾಗಿ ಎಷ್ಟೋ ಬಡವರಿಗೆ ಈಗ ಕೆಲಸ ಸಿಕ್ಕಂತಾಗಿದೆ.
Rama flag will be hoisted in the houses of devotees during the Sri Rama Pratistha program in Ayodhya. Preparations for this are going on in Dharwad.
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…