Advertisement
MIRROR FOCUS

ರಾಮಮಂದಿರ ಉದ್ಘಾಟನೆಯಂದು ಮನೆ ಮನೆಗಳಲ್ಲಿ ಹಾರಾಡಲಿದೆ ರಾಮನ ಧ್ವಜ | ಧಾರಾವಾಡದಲ್ಲಿ ತಯಾರಾಗುತ್ತಿದೆ 3 ಲಕ್ಷ ರಾಮ ಧ್ವಜ |

Share

ಜನವರಿ 22ರಂದು ಇಡೀ ದೇಶವೆಲ್ಲಾ ರಾಮನ ಪ್ರೀತಿಗೆ ಪಾತ್ರವಾಗಲಿದೆ. ಆ ದಿನವನ್ನು ಹಬ್ಬವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ (Ram Flag) ಹಾರಾಡಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ (Dharawada) ರಾಮನ ಧ್ವಜದ ತಯಾರಿ‌ ಜೋರಾಗಿ ನಡೆಯುತ್ತಿದೆ.

ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ 15 ದಿನಗಳಿಂದ ಈ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ. ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್‌ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.

4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್‌ವರೆಗೆ ಧ್ವಜ ಇವೆ.  5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ.‌ ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಹಗಲು ಕೆಲಸ ಮಾಡಿದರೆ, ಪುರುಷರು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಒಬ್ಬರು 2 ಸಾವಿರಕ್ಕೂ ಹೆಚ್ಚು ಧ್ವಜ ತಯಾರಿ‌ ಮಾಡುತ್ತಿದ್ದಾರೆ. ಅಯೋಧ್ಯೆ ಕಾರ್ಯಕ್ರಮದಿಂದಾಗಿ ಎಷ್ಟೋ ಬಡವರಿಗೆ ಈಗ ಕೆಲಸ ಸಿಕ್ಕಂತಾಗಿದೆ.

  • ಅಂತರ್ಜಾಲ ಮಾಹಿತಿ

Rama flag will be hoisted in the houses of devotees during the Sri Rama Pratistha program in Ayodhya. Preparations for this are going on in Dharwad.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

6 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

11 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

22 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

23 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

24 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

24 hours ago