ರಾಮಕಥಾ ಸಮಾರೋಪ | ರಾಮಸೇತು ವೈಜ್ಞಾನಿಕ ಸತ್ಯ – ರಾಘವೇಶ್ವರ ಶ್ರೀ

May 1, 2022
9:43 PM
ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು ಪ್ರತಿಪಾದಿಸಿದರು.
ರಾಮಾಯಣ ವಿವರಣೆ ಪ್ರಕಾರ ಸಾಗರ ಸೇತು ನೂರು ಯೋಜನ ಉದ್ದ ಹತ್ತು ಯೋಜನ ಅಗಲ ಇದೆ. ಅಂದರೆ ಇದು 35 ಕಿಲೋಮೀಟರ್ ಉದ್ದ. 3.5 ಕಿಲೋಮೀಟರ್ ಅಗಲ ಇದೆ. ವೈಜ್ಞಾನಿಕ ಪರಿಭಾಷೆಗೆ ತಕ್ಕಂತೆ ಅನುಗುಣವಾಗಿ ಇದೆ. ಆಧುನಿಕ ವಿಜ್ಞಾನ ಕೂಡಾ ಸೇತುವೆಯ ಪರಿಮಾಣ, ಉದ್ದ- ಅಗಲದ ಅನುಪಾತ ಇದೇ ಎನ್ನುವುದನ್ನು ದೃಢಪಡಿಸುತ್ತದೆ ಎಂದರು.
ರಾಮಾಯಣದಲ್ಲಿ ಇರುವ ವಿವರಣೆಯಂತೆ ಅದೇ ಜಾತಿಯ ವೃಕ್ಷಗಳನ್ನೂ ಸೇತುವೆ ನಿರ್ಮಾಣಕ್ಕೆ ಬಳಸಲಾಗಿದೆ ಎನ್ನುವುದನ್ನು ವಿಜ್ಞಾನಿಗಳು ಕೂಡಾ ಒಪ್ಪಿದ್ದಾರೆ. ನಾಸಾ ಚಿತ್ರ ಕೂಡಾ ಇದನ್ನು ದೃಢಪಡಿಸಿದೆ. ಅನೇಕ ಚೌಕಾಕಾರದ ನಿರ್ಮಾಣಗಳಿದ್ದು, ಇವು ಪ್ರಾಕೃತಿಕವಾಗಿ ನಿರ್ಮಾಣವಾಗಲು ಸಾಧ್ಯವಿಲ್ಲ. ಇದು ನೆಲ ಸೇತು. ರಾಮಸೇತು. ಆಡಮ್ಸ್ ಬ್ರಿಡ್ಜ್ ಅಲ್ಲ; ಅಥವಾ ಅಲಂ ಸೇತು ಅಲ್ಲ ಎಂದು ಮಾರ್ಮಿಕವಾಗಿ ನುಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror