Advertisement
ಸುದ್ದಿಗಳು

ರಾಮಕಥಾ ಸಮಾರೋಪ | ರಾಮಸೇತು ವೈಜ್ಞಾನಿಕ ಸತ್ಯ – ರಾಘವೇಶ್ವರ ಶ್ರೀ

Share
ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು ಪ್ರತಿಪಾದಿಸಿದರು.
ರಾಮಾಯಣ ವಿವರಣೆ ಪ್ರಕಾರ ಸಾಗರ ಸೇತು ನೂರು ಯೋಜನ ಉದ್ದ ಹತ್ತು ಯೋಜನ ಅಗಲ ಇದೆ. ಅಂದರೆ ಇದು 35 ಕಿಲೋಮೀಟರ್ ಉದ್ದ. 3.5 ಕಿಲೋಮೀಟರ್ ಅಗಲ ಇದೆ. ವೈಜ್ಞಾನಿಕ ಪರಿಭಾಷೆಗೆ ತಕ್ಕಂತೆ ಅನುಗುಣವಾಗಿ ಇದೆ. ಆಧುನಿಕ ವಿಜ್ಞಾನ ಕೂಡಾ ಸೇತುವೆಯ ಪರಿಮಾಣ, ಉದ್ದ- ಅಗಲದ ಅನುಪಾತ ಇದೇ ಎನ್ನುವುದನ್ನು ದೃಢಪಡಿಸುತ್ತದೆ ಎಂದರು.
ರಾಮಾಯಣದಲ್ಲಿ ಇರುವ ವಿವರಣೆಯಂತೆ ಅದೇ ಜಾತಿಯ ವೃಕ್ಷಗಳನ್ನೂ ಸೇತುವೆ ನಿರ್ಮಾಣಕ್ಕೆ ಬಳಸಲಾಗಿದೆ ಎನ್ನುವುದನ್ನು ವಿಜ್ಞಾನಿಗಳು ಕೂಡಾ ಒಪ್ಪಿದ್ದಾರೆ. ನಾಸಾ ಚಿತ್ರ ಕೂಡಾ ಇದನ್ನು ದೃಢಪಡಿಸಿದೆ. ಅನೇಕ ಚೌಕಾಕಾರದ ನಿರ್ಮಾಣಗಳಿದ್ದು, ಇವು ಪ್ರಾಕೃತಿಕವಾಗಿ ನಿರ್ಮಾಣವಾಗಲು ಸಾಧ್ಯವಿಲ್ಲ. ಇದು ನೆಲ ಸೇತು. ರಾಮಸೇತು. ಆಡಮ್ಸ್ ಬ್ರಿಡ್ಜ್ ಅಲ್ಲ; ಅಥವಾ ಅಲಂ ಸೇತು ಅಲ್ಲ ಎಂದು ಮಾರ್ಮಿಕವಾಗಿ ನುಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

5 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

10 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

21 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

22 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

23 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

23 hours ago