Advertisement
ಸುದ್ದಿಗಳು

ರಾಮಕಥಾ ಸಮಾರೋಪ | ರಾಮಸೇತು ವೈಜ್ಞಾನಿಕ ಸತ್ಯ – ರಾಘವೇಶ್ವರ ಶ್ರೀ

Share
ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು ಪ್ರತಿಪಾದಿಸಿದರು.
ರಾಮಾಯಣ ವಿವರಣೆ ಪ್ರಕಾರ ಸಾಗರ ಸೇತು ನೂರು ಯೋಜನ ಉದ್ದ ಹತ್ತು ಯೋಜನ ಅಗಲ ಇದೆ. ಅಂದರೆ ಇದು 35 ಕಿಲೋಮೀಟರ್ ಉದ್ದ. 3.5 ಕಿಲೋಮೀಟರ್ ಅಗಲ ಇದೆ. ವೈಜ್ಞಾನಿಕ ಪರಿಭಾಷೆಗೆ ತಕ್ಕಂತೆ ಅನುಗುಣವಾಗಿ ಇದೆ. ಆಧುನಿಕ ವಿಜ್ಞಾನ ಕೂಡಾ ಸೇತುವೆಯ ಪರಿಮಾಣ, ಉದ್ದ- ಅಗಲದ ಅನುಪಾತ ಇದೇ ಎನ್ನುವುದನ್ನು ದೃಢಪಡಿಸುತ್ತದೆ ಎಂದರು.
ರಾಮಾಯಣದಲ್ಲಿ ಇರುವ ವಿವರಣೆಯಂತೆ ಅದೇ ಜಾತಿಯ ವೃಕ್ಷಗಳನ್ನೂ ಸೇತುವೆ ನಿರ್ಮಾಣಕ್ಕೆ ಬಳಸಲಾಗಿದೆ ಎನ್ನುವುದನ್ನು ವಿಜ್ಞಾನಿಗಳು ಕೂಡಾ ಒಪ್ಪಿದ್ದಾರೆ. ನಾಸಾ ಚಿತ್ರ ಕೂಡಾ ಇದನ್ನು ದೃಢಪಡಿಸಿದೆ. ಅನೇಕ ಚೌಕಾಕಾರದ ನಿರ್ಮಾಣಗಳಿದ್ದು, ಇವು ಪ್ರಾಕೃತಿಕವಾಗಿ ನಿರ್ಮಾಣವಾಗಲು ಸಾಧ್ಯವಿಲ್ಲ. ಇದು ನೆಲ ಸೇತು. ರಾಮಸೇತು. ಆಡಮ್ಸ್ ಬ್ರಿಡ್ಜ್ ಅಲ್ಲ; ಅಥವಾ ಅಲಂ ಸೇತು ಅಲ್ಲ ಎಂದು ಮಾರ್ಮಿಕವಾಗಿ ನುಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

20 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago