Advertisement
ಸುದ್ದಿಗಳು

ರಾಮಕಥಾ ಸಮಾರೋಪ | ರಾಮಸೇತು ವೈಜ್ಞಾನಿಕ ಸತ್ಯ – ರಾಘವೇಶ್ವರ ಶ್ರೀ

Share
ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು ಪ್ರತಿಪಾದಿಸಿದರು.
ರಾಮಾಯಣ ವಿವರಣೆ ಪ್ರಕಾರ ಸಾಗರ ಸೇತು ನೂರು ಯೋಜನ ಉದ್ದ ಹತ್ತು ಯೋಜನ ಅಗಲ ಇದೆ. ಅಂದರೆ ಇದು 35 ಕಿಲೋಮೀಟರ್ ಉದ್ದ. 3.5 ಕಿಲೋಮೀಟರ್ ಅಗಲ ಇದೆ. ವೈಜ್ಞಾನಿಕ ಪರಿಭಾಷೆಗೆ ತಕ್ಕಂತೆ ಅನುಗುಣವಾಗಿ ಇದೆ. ಆಧುನಿಕ ವಿಜ್ಞಾನ ಕೂಡಾ ಸೇತುವೆಯ ಪರಿಮಾಣ, ಉದ್ದ- ಅಗಲದ ಅನುಪಾತ ಇದೇ ಎನ್ನುವುದನ್ನು ದೃಢಪಡಿಸುತ್ತದೆ ಎಂದರು.
ರಾಮಾಯಣದಲ್ಲಿ ಇರುವ ವಿವರಣೆಯಂತೆ ಅದೇ ಜಾತಿಯ ವೃಕ್ಷಗಳನ್ನೂ ಸೇತುವೆ ನಿರ್ಮಾಣಕ್ಕೆ ಬಳಸಲಾಗಿದೆ ಎನ್ನುವುದನ್ನು ವಿಜ್ಞಾನಿಗಳು ಕೂಡಾ ಒಪ್ಪಿದ್ದಾರೆ. ನಾಸಾ ಚಿತ್ರ ಕೂಡಾ ಇದನ್ನು ದೃಢಪಡಿಸಿದೆ. ಅನೇಕ ಚೌಕಾಕಾರದ ನಿರ್ಮಾಣಗಳಿದ್ದು, ಇವು ಪ್ರಾಕೃತಿಕವಾಗಿ ನಿರ್ಮಾಣವಾಗಲು ಸಾಧ್ಯವಿಲ್ಲ. ಇದು ನೆಲ ಸೇತು. ರಾಮಸೇತು. ಆಡಮ್ಸ್ ಬ್ರಿಡ್ಜ್ ಅಲ್ಲ; ಅಥವಾ ಅಲಂ ಸೇತು ಅಲ್ಲ ಎಂದು ಮಾರ್ಮಿಕವಾಗಿ ನುಡಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

6 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

16 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago