Advertisement
ಸುದ್ದಿಗಳು

ರಾಮಕಥಾ ಸಮಾರೋಪ | ರಾಮಸೇತು ವೈಜ್ಞಾನಿಕ ಸತ್ಯ – ರಾಘವೇಶ್ವರ ಶ್ರೀ

Share
ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು ಪ್ರತಿಪಾದಿಸಿದರು.
ರಾಮಾಯಣ ವಿವರಣೆ ಪ್ರಕಾರ ಸಾಗರ ಸೇತು ನೂರು ಯೋಜನ ಉದ್ದ ಹತ್ತು ಯೋಜನ ಅಗಲ ಇದೆ. ಅಂದರೆ ಇದು 35 ಕಿಲೋಮೀಟರ್ ಉದ್ದ. 3.5 ಕಿಲೋಮೀಟರ್ ಅಗಲ ಇದೆ. ವೈಜ್ಞಾನಿಕ ಪರಿಭಾಷೆಗೆ ತಕ್ಕಂತೆ ಅನುಗುಣವಾಗಿ ಇದೆ. ಆಧುನಿಕ ವಿಜ್ಞಾನ ಕೂಡಾ ಸೇತುವೆಯ ಪರಿಮಾಣ, ಉದ್ದ- ಅಗಲದ ಅನುಪಾತ ಇದೇ ಎನ್ನುವುದನ್ನು ದೃಢಪಡಿಸುತ್ತದೆ ಎಂದರು.
ರಾಮಾಯಣದಲ್ಲಿ ಇರುವ ವಿವರಣೆಯಂತೆ ಅದೇ ಜಾತಿಯ ವೃಕ್ಷಗಳನ್ನೂ ಸೇತುವೆ ನಿರ್ಮಾಣಕ್ಕೆ ಬಳಸಲಾಗಿದೆ ಎನ್ನುವುದನ್ನು ವಿಜ್ಞಾನಿಗಳು ಕೂಡಾ ಒಪ್ಪಿದ್ದಾರೆ. ನಾಸಾ ಚಿತ್ರ ಕೂಡಾ ಇದನ್ನು ದೃಢಪಡಿಸಿದೆ. ಅನೇಕ ಚೌಕಾಕಾರದ ನಿರ್ಮಾಣಗಳಿದ್ದು, ಇವು ಪ್ರಾಕೃತಿಕವಾಗಿ ನಿರ್ಮಾಣವಾಗಲು ಸಾಧ್ಯವಿಲ್ಲ. ಇದು ನೆಲ ಸೇತು. ರಾಮಸೇತು. ಆಡಮ್ಸ್ ಬ್ರಿಡ್ಜ್ ಅಲ್ಲ; ಅಥವಾ ಅಲಂ ಸೇತು ಅಲ್ಲ ಎಂದು ಮಾರ್ಮಿಕವಾಗಿ ನುಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago