Advertisement
ಸುದ್ದಿಗಳು

ರಾಮಕಥಾ ಸಮಾರೋಪ | ರಾಮಸೇತು ವೈಜ್ಞಾನಿಕ ಸತ್ಯ – ರಾಘವೇಶ್ವರ ಶ್ರೀ

Share
ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು ಪ್ರತಿಪಾದಿಸಿದರು.
ರಾಮಾಯಣ ವಿವರಣೆ ಪ್ರಕಾರ ಸಾಗರ ಸೇತು ನೂರು ಯೋಜನ ಉದ್ದ ಹತ್ತು ಯೋಜನ ಅಗಲ ಇದೆ. ಅಂದರೆ ಇದು 35 ಕಿಲೋಮೀಟರ್ ಉದ್ದ. 3.5 ಕಿಲೋಮೀಟರ್ ಅಗಲ ಇದೆ. ವೈಜ್ಞಾನಿಕ ಪರಿಭಾಷೆಗೆ ತಕ್ಕಂತೆ ಅನುಗುಣವಾಗಿ ಇದೆ. ಆಧುನಿಕ ವಿಜ್ಞಾನ ಕೂಡಾ ಸೇತುವೆಯ ಪರಿಮಾಣ, ಉದ್ದ- ಅಗಲದ ಅನುಪಾತ ಇದೇ ಎನ್ನುವುದನ್ನು ದೃಢಪಡಿಸುತ್ತದೆ ಎಂದರು.
ರಾಮಾಯಣದಲ್ಲಿ ಇರುವ ವಿವರಣೆಯಂತೆ ಅದೇ ಜಾತಿಯ ವೃಕ್ಷಗಳನ್ನೂ ಸೇತುವೆ ನಿರ್ಮಾಣಕ್ಕೆ ಬಳಸಲಾಗಿದೆ ಎನ್ನುವುದನ್ನು ವಿಜ್ಞಾನಿಗಳು ಕೂಡಾ ಒಪ್ಪಿದ್ದಾರೆ. ನಾಸಾ ಚಿತ್ರ ಕೂಡಾ ಇದನ್ನು ದೃಢಪಡಿಸಿದೆ. ಅನೇಕ ಚೌಕಾಕಾರದ ನಿರ್ಮಾಣಗಳಿದ್ದು, ಇವು ಪ್ರಾಕೃತಿಕವಾಗಿ ನಿರ್ಮಾಣವಾಗಲು ಸಾಧ್ಯವಿಲ್ಲ. ಇದು ನೆಲ ಸೇತು. ರಾಮಸೇತು. ಆಡಮ್ಸ್ ಬ್ರಿಡ್ಜ್ ಅಲ್ಲ; ಅಥವಾ ಅಲಂ ಸೇತು ಅಲ್ಲ ಎಂದು ಮಾರ್ಮಿಕವಾಗಿ ನುಡಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

10 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

18 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

20 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago