500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |

April 17, 2024
2:45 PM

ಅದು 5 ದಶಕಗಳ ಕನಸು. ಈಗ ಈಡೇರಿದೆ. ಶ್ರೀ ರಾಮನನ್ನು(Lord Rama) ಅಯೋಧ್ಯೆಯಲ್ಲಿ(Ayodhya) ಮತ್ತೆ ಮರು ಸ್ಥಾಪನೆ ಮಾಡಬೇಕು ಅನ್ನುವುದು ರಾಮ ಭಕ್ತರ, ದೇಶದ  ಕೋಟ್ಯಾಂತರ ಹಿಂದೂಗಳ ಕನಸಾಗಿತ್ತು. ಇದಾಗಿ 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯಂದು (Rama Navami) ಬಾಲರಾಮನಿಗೆ ಸೂರ್ಯ ಅಭಿಷೇಕ (Surya Tilak)ನಡೆಯಿತು.

Advertisement

ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ  ನಂತರ ಸೂರ್ಯ ರಶ್ಮಿ ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು. ರಾಮ ಮಂದಿರದಲ್ಲಿ (Ram Mandir) ಸೂಕ್ತ ಸ್ಥಳಗಳಲ್ಲಿ ಅಳವಡಿಸಿರುವ ಮಸೂರಗಳು ಸೂರ್ಯನ ಕಿರಣವನ್ನು ರಾಮ ಲಲ್ಲಾ ಮೂರ್ತಿಯ ಹಣೆಯನ್ನು ಸ್ಪರ್ಶಿಸಿತು. ಯಾವುದೇ ಬ್ಯಾಟರಿ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡದೇ ಸೂರ್ಯನ ಕಿರಣಗಳು ನೇರವಾಗಿ ಬಾಲ ರಾಮನ ಹಣೆಯನ್ನು ಸ್ಪರ್ಶಿಸುವಂತೆ ಮಾಡಲು ಮಸೂರಗಳನ್ನು ಮಾತ್ರ ಬಳಕೆ ಮಾಡಲಾಗಿತ್ತು.

ಬಾಲಕ ರಾಮ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. ಮುಂಜಾನೆಯೇ ಬೆಳಗಿನ ಜಾವ 3.30ಕ್ಕೆ ಮಂಗಳಾರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ರಾತ್ರಿ 11 ರ ತನಕವೂ ಭಕ್ತರಿಗೆ ರಾಮನ ದರ್ಶನ ಸಿಗಲಿದೆ. ಇಂದು ಬರೋಬ್ಬರಿ 19 ಗಂಟೆಗಳ ಕಾಲ ರಾಮ ಮಂದಿರ ಓಪನ್ ಇರಲಿದೆ.

ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. ಬಾಲಕರಾಮನ ಪೂಜೆ ಕೈಂಕರ್ಯಗಳು ನೇರ ಪ್ರಸಾರಗೊಳ್ಳುತ್ತಿದ್ದು, ಅಯೋಧ್ಯೆಯಾದ್ಯಂತ 100 ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ
April 26, 2025
9:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ
April 26, 2025
9:12 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |
April 26, 2025
1:58 PM
by: ಸಾಯಿಶೇಖರ್ ಕರಿಕಳ
ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ
April 26, 2025
9:21 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group