MIRROR FOCUS

500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅದು 5 ದಶಕಗಳ ಕನಸು. ಈಗ ಈಡೇರಿದೆ. ಶ್ರೀ ರಾಮನನ್ನು(Lord Rama) ಅಯೋಧ್ಯೆಯಲ್ಲಿ(Ayodhya) ಮತ್ತೆ ಮರು ಸ್ಥಾಪನೆ ಮಾಡಬೇಕು ಅನ್ನುವುದು ರಾಮ ಭಕ್ತರ, ದೇಶದ  ಕೋಟ್ಯಾಂತರ ಹಿಂದೂಗಳ ಕನಸಾಗಿತ್ತು. ಇದಾಗಿ 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯಂದು (Rama Navami) ಬಾಲರಾಮನಿಗೆ ಸೂರ್ಯ ಅಭಿಷೇಕ (Surya Tilak)ನಡೆಯಿತು.

Advertisement
Advertisement

ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ  ನಂತರ ಸೂರ್ಯ ರಶ್ಮಿ ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು. ರಾಮ ಮಂದಿರದಲ್ಲಿ (Ram Mandir) ಸೂಕ್ತ ಸ್ಥಳಗಳಲ್ಲಿ ಅಳವಡಿಸಿರುವ ಮಸೂರಗಳು ಸೂರ್ಯನ ಕಿರಣವನ್ನು ರಾಮ ಲಲ್ಲಾ ಮೂರ್ತಿಯ ಹಣೆಯನ್ನು ಸ್ಪರ್ಶಿಸಿತು. ಯಾವುದೇ ಬ್ಯಾಟರಿ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡದೇ ಸೂರ್ಯನ ಕಿರಣಗಳು ನೇರವಾಗಿ ಬಾಲ ರಾಮನ ಹಣೆಯನ್ನು ಸ್ಪರ್ಶಿಸುವಂತೆ ಮಾಡಲು ಮಸೂರಗಳನ್ನು ಮಾತ್ರ ಬಳಕೆ ಮಾಡಲಾಗಿತ್ತು.

ಬಾಲಕ ರಾಮ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. ಮುಂಜಾನೆಯೇ ಬೆಳಗಿನ ಜಾವ 3.30ಕ್ಕೆ ಮಂಗಳಾರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ರಾತ್ರಿ 11 ರ ತನಕವೂ ಭಕ್ತರಿಗೆ ರಾಮನ ದರ್ಶನ ಸಿಗಲಿದೆ. ಇಂದು ಬರೋಬ್ಬರಿ 19 ಗಂಟೆಗಳ ಕಾಲ ರಾಮ ಮಂದಿರ ಓಪನ್ ಇರಲಿದೆ.

ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. ಬಾಲಕರಾಮನ ಪೂಜೆ ಕೈಂಕರ್ಯಗಳು ನೇರ ಪ್ರಸಾರಗೊಳ್ಳುತ್ತಿದ್ದು, ಅಯೋಧ್ಯೆಯಾದ್ಯಂತ 100 ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

6 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

22 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

23 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago