ಅದು 5 ದಶಕಗಳ ಕನಸು. ಈಗ ಈಡೇರಿದೆ. ಶ್ರೀ ರಾಮನನ್ನು(Lord Rama) ಅಯೋಧ್ಯೆಯಲ್ಲಿ(Ayodhya) ಮತ್ತೆ ಮರು ಸ್ಥಾಪನೆ ಮಾಡಬೇಕು ಅನ್ನುವುದು ರಾಮ ಭಕ್ತರ, ದೇಶದ ಕೋಟ್ಯಾಂತರ ಹಿಂದೂಗಳ ಕನಸಾಗಿತ್ತು. ಇದಾಗಿ 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯಂದು (Rama Navami) ಬಾಲರಾಮನಿಗೆ ಸೂರ್ಯ ಅಭಿಷೇಕ (Surya Tilak)ನಡೆಯಿತು.
ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ ನಂತರ ಸೂರ್ಯ ರಶ್ಮಿ ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು. ರಾಮ ಮಂದಿರದಲ್ಲಿ (Ram Mandir) ಸೂಕ್ತ ಸ್ಥಳಗಳಲ್ಲಿ ಅಳವಡಿಸಿರುವ ಮಸೂರಗಳು ಸೂರ್ಯನ ಕಿರಣವನ್ನು ರಾಮ ಲಲ್ಲಾ ಮೂರ್ತಿಯ ಹಣೆಯನ್ನು ಸ್ಪರ್ಶಿಸಿತು. ಯಾವುದೇ ಬ್ಯಾಟರಿ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡದೇ ಸೂರ್ಯನ ಕಿರಣಗಳು ನೇರವಾಗಿ ಬಾಲ ರಾಮನ ಹಣೆಯನ್ನು ಸ್ಪರ್ಶಿಸುವಂತೆ ಮಾಡಲು ಮಸೂರಗಳನ್ನು ಮಾತ್ರ ಬಳಕೆ ಮಾಡಲಾಗಿತ್ತು.
ಬಾಲಕ ರಾಮ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. ಮುಂಜಾನೆಯೇ ಬೆಳಗಿನ ಜಾವ 3.30ಕ್ಕೆ ಮಂಗಳಾರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ರಾತ್ರಿ 11 ರ ತನಕವೂ ಭಕ್ತರಿಗೆ ರಾಮನ ದರ್ಶನ ಸಿಗಲಿದೆ. ಇಂದು ಬರೋಬ್ಬರಿ 19 ಗಂಟೆಗಳ ಕಾಲ ರಾಮ ಮಂದಿರ ಓಪನ್ ಇರಲಿದೆ.
ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. ಬಾಲಕರಾಮನ ಪೂಜೆ ಕೈಂಕರ್ಯಗಳು ನೇರ ಪ್ರಸಾರಗೊಳ್ಳುತ್ತಿದ್ದು, ಅಯೋಧ್ಯೆಯಾದ್ಯಂತ 100 ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…