Advertisement
MIRROR FOCUS

500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |

Share

ಅದು 5 ದಶಕಗಳ ಕನಸು. ಈಗ ಈಡೇರಿದೆ. ಶ್ರೀ ರಾಮನನ್ನು(Lord Rama) ಅಯೋಧ್ಯೆಯಲ್ಲಿ(Ayodhya) ಮತ್ತೆ ಮರು ಸ್ಥಾಪನೆ ಮಾಡಬೇಕು ಅನ್ನುವುದು ರಾಮ ಭಕ್ತರ, ದೇಶದ  ಕೋಟ್ಯಾಂತರ ಹಿಂದೂಗಳ ಕನಸಾಗಿತ್ತು. ಇದಾಗಿ 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯಂದು (Rama Navami) ಬಾಲರಾಮನಿಗೆ ಸೂರ್ಯ ಅಭಿಷೇಕ (Surya Tilak)ನಡೆಯಿತು.

Advertisement
Advertisement

ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ  ನಂತರ ಸೂರ್ಯ ರಶ್ಮಿ ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು. ರಾಮ ಮಂದಿರದಲ್ಲಿ (Ram Mandir) ಸೂಕ್ತ ಸ್ಥಳಗಳಲ್ಲಿ ಅಳವಡಿಸಿರುವ ಮಸೂರಗಳು ಸೂರ್ಯನ ಕಿರಣವನ್ನು ರಾಮ ಲಲ್ಲಾ ಮೂರ್ತಿಯ ಹಣೆಯನ್ನು ಸ್ಪರ್ಶಿಸಿತು. ಯಾವುದೇ ಬ್ಯಾಟರಿ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡದೇ ಸೂರ್ಯನ ಕಿರಣಗಳು ನೇರವಾಗಿ ಬಾಲ ರಾಮನ ಹಣೆಯನ್ನು ಸ್ಪರ್ಶಿಸುವಂತೆ ಮಾಡಲು ಮಸೂರಗಳನ್ನು ಮಾತ್ರ ಬಳಕೆ ಮಾಡಲಾಗಿತ್ತು.

Advertisement

ಬಾಲಕ ರಾಮ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. ಮುಂಜಾನೆಯೇ ಬೆಳಗಿನ ಜಾವ 3.30ಕ್ಕೆ ಮಂಗಳಾರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ರಾತ್ರಿ 11 ರ ತನಕವೂ ಭಕ್ತರಿಗೆ ರಾಮನ ದರ್ಶನ ಸಿಗಲಿದೆ. ಇಂದು ಬರೋಬ್ಬರಿ 19 ಗಂಟೆಗಳ ಕಾಲ ರಾಮ ಮಂದಿರ ಓಪನ್ ಇರಲಿದೆ.

Advertisement

ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. ಬಾಲಕರಾಮನ ಪೂಜೆ ಕೈಂಕರ್ಯಗಳು ನೇರ ಪ್ರಸಾರಗೊಳ್ಳುತ್ತಿದ್ದು, ಅಯೋಧ್ಯೆಯಾದ್ಯಂತ 100 ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 21-05-2024 | ರಾಜ್ಯದ ಹಲವು ಕಡೆ ಮುಂದುವರಿದ ಮಳೆ | ಮೇ.23 ನಂತರ ಮಳೆ ಕಡಿಮೆ |

ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್,…

21 mins ago

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

16 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

23 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

23 hours ago