Advertisement
MIRROR FOCUS

500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |

Share

ಅದು 5 ದಶಕಗಳ ಕನಸು. ಈಗ ಈಡೇರಿದೆ. ಶ್ರೀ ರಾಮನನ್ನು(Lord Rama) ಅಯೋಧ್ಯೆಯಲ್ಲಿ(Ayodhya) ಮತ್ತೆ ಮರು ಸ್ಥಾಪನೆ ಮಾಡಬೇಕು ಅನ್ನುವುದು ರಾಮ ಭಕ್ತರ, ದೇಶದ  ಕೋಟ್ಯಾಂತರ ಹಿಂದೂಗಳ ಕನಸಾಗಿತ್ತು. ಇದಾಗಿ 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯಂದು (Rama Navami) ಬಾಲರಾಮನಿಗೆ ಸೂರ್ಯ ಅಭಿಷೇಕ (Surya Tilak)ನಡೆಯಿತು.

ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ  ನಂತರ ಸೂರ್ಯ ರಶ್ಮಿ ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು. ರಾಮ ಮಂದಿರದಲ್ಲಿ (Ram Mandir) ಸೂಕ್ತ ಸ್ಥಳಗಳಲ್ಲಿ ಅಳವಡಿಸಿರುವ ಮಸೂರಗಳು ಸೂರ್ಯನ ಕಿರಣವನ್ನು ರಾಮ ಲಲ್ಲಾ ಮೂರ್ತಿಯ ಹಣೆಯನ್ನು ಸ್ಪರ್ಶಿಸಿತು. ಯಾವುದೇ ಬ್ಯಾಟರಿ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡದೇ ಸೂರ್ಯನ ಕಿರಣಗಳು ನೇರವಾಗಿ ಬಾಲ ರಾಮನ ಹಣೆಯನ್ನು ಸ್ಪರ್ಶಿಸುವಂತೆ ಮಾಡಲು ಮಸೂರಗಳನ್ನು ಮಾತ್ರ ಬಳಕೆ ಮಾಡಲಾಗಿತ್ತು.

ಬಾಲಕ ರಾಮ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. ಮುಂಜಾನೆಯೇ ಬೆಳಗಿನ ಜಾವ 3.30ಕ್ಕೆ ಮಂಗಳಾರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ರಾತ್ರಿ 11 ರ ತನಕವೂ ಭಕ್ತರಿಗೆ ರಾಮನ ದರ್ಶನ ಸಿಗಲಿದೆ. ಇಂದು ಬರೋಬ್ಬರಿ 19 ಗಂಟೆಗಳ ಕಾಲ ರಾಮ ಮಂದಿರ ಓಪನ್ ಇರಲಿದೆ.

ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. ಬಾಲಕರಾಮನ ಪೂಜೆ ಕೈಂಕರ್ಯಗಳು ನೇರ ಪ್ರಸಾರಗೊಳ್ಳುತ್ತಿದ್ದು, ಅಯೋಧ್ಯೆಯಾದ್ಯಂತ 100 ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

3 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

12 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

15 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

20 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago