ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ಚಾಲನೆ ನೀಡಿದ್ದಾರೆ.
ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು, - ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ - ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ. - ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ. - ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ. - ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
– ಅಂತರ್ಜಾಲ ಮಾಹಿತಿ
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…