“ಚಂದನ ಸಾಹಿತ್ಯ ಜ್ಯೋತಿ” ಪ್ರಶಸ್ತಿ ಪಡೆದ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ ರಶ್ಮಿ ಸನಿಲ್ |

February 25, 2022
9:28 AM

ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು ಸಾಹಿತ್ಯ ಕ್ಷೇತ್ರದಲ್ಲೂ ಎತ್ತಿದ ಕೈ. ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು, ನೂರಾರು ಕವನ ರಚಿಸಿ 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು. ಇದೀಗ “ಚಂದನ ಸಾಹಿತ್ಯ ಜ್ಯೋತಿ” ಎಂಬ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಲಾಯಿತು.

Advertisement
Advertisement

ರಶ್ಮಿ ಸನಿಲ್ ಇವರು ಮೂಲತಃ ಮಂಗಳೂರಿನ ಕೊಲ್ಯ ಸೋಮೇಶ್ವರದಲ್ಲಿ ಹುಟ್ಟಿ ಬೆಳೆದವರು. ದಿವಂಗತ ಕೃಷ್ಣ ಕೊಟ್ಯಾನ್ ಹಾಗೂ ನವೀನ ಕುಮಾರಿ ಇವರ ಸುಪುತ್ರಿ. ಮಂಗಳೂರಿನ ಖ್ಯಾತ ಕ್ರಿಕೆಟ್ ಆಟಗಾರ ನಿತೇಶ್ ಕೋಟ್ಯಾನ್ ಇವರ ಪತ್ನಿ.

ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು, ನೂರಾರು ಕವನ ರಚಿಸಿ ಮನೆ ಮಾತಾದವರು. 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು. ಲೇಖಕಿಯಾಗಿ, ಬರಹಗಾರ್ತಿಯಾಗಿ, ನೃತ್ಯಪಟುವಾಗಿ, ನಿರೂಪಕಿಯಾಗಿಯೂ ಗುರುತಿಸಿಕೊಂಡವರು. ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಕೂಡ ಆಗಿರುವರು. ಯುವವಾಹಿನಿ, ರೋಟರಿ, ಮಹಿಳಾ ಮಂಡಳಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್, ಕಥಾಬಿಂದು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ, ಪುತ್ತೂರು ಸಾಹಿತ್ಯ ವೇದಿಕೆ, ಚಂದನ ಸಾಹಿತ್ಯ ವೇದಿಕೆ, ನವಚೇತನ ಸೇವಾ ಬಳಗ (ರಿ). ತೋಡಾರು ಮೊದಲಾದ ಪ್ರತಿಷ್ಠಿತ ಸಂಸ್ಥೆಗಳ ಸದಸ್ಯೆ ಕೂಡ ಆಗಿದ್ದಾರೆ.

ಇವರ ಈ ಗಣನೀಯ ಸೇವೆಯನ್ನು ಗುರುತಿಸಿ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಭೀಮರಾವ್ ವಾಷ್ಟರ್ , ನಾರಾಯಣ ಕುಕ್ಕುವಳ್ಳಿ , ವೈಲೇಶ್ ಪಿ. ಕೊಡಗು, ಹಾಜಿ ಅಬೂಬಕ್ಕರ್ ಮೊದಲಾದ ಗಣ್ಯರ ಸಮ್ಮುಖದಲ್ಲಿ ” ಚಂದನ ಸಾಹಿತ್ಯ ಜ್ಯೋತಿ “ ಎಂಬ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಲಾಯಿತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror