Advertisement
ಸುದ್ದಿಗಳು

“ಚಂದನ ಸಾಹಿತ್ಯ ಜ್ಯೋತಿ” ಪ್ರಶಸ್ತಿ ಪಡೆದ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ ರಶ್ಮಿ ಸನಿಲ್ |

Share

ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು ಸಾಹಿತ್ಯ ಕ್ಷೇತ್ರದಲ್ಲೂ ಎತ್ತಿದ ಕೈ. ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು, ನೂರಾರು ಕವನ ರಚಿಸಿ 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು. ಇದೀಗ “ಚಂದನ ಸಾಹಿತ್ಯ ಜ್ಯೋತಿ” ಎಂಬ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಲಾಯಿತು.

ರಶ್ಮಿ ಸನಿಲ್ ಇವರು ಮೂಲತಃ ಮಂಗಳೂರಿನ ಕೊಲ್ಯ ಸೋಮೇಶ್ವರದಲ್ಲಿ ಹುಟ್ಟಿ ಬೆಳೆದವರು. ದಿವಂಗತ ಕೃಷ್ಣ ಕೊಟ್ಯಾನ್ ಹಾಗೂ ನವೀನ ಕುಮಾರಿ ಇವರ ಸುಪುತ್ರಿ. ಮಂಗಳೂರಿನ ಖ್ಯಾತ ಕ್ರಿಕೆಟ್ ಆಟಗಾರ ನಿತೇಶ್ ಕೋಟ್ಯಾನ್ ಇವರ ಪತ್ನಿ.

ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು, ನೂರಾರು ಕವನ ರಚಿಸಿ ಮನೆ ಮಾತಾದವರು. 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು. ಲೇಖಕಿಯಾಗಿ, ಬರಹಗಾರ್ತಿಯಾಗಿ, ನೃತ್ಯಪಟುವಾಗಿ, ನಿರೂಪಕಿಯಾಗಿಯೂ ಗುರುತಿಸಿಕೊಂಡವರು. ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಕೂಡ ಆಗಿರುವರು. ಯುವವಾಹಿನಿ, ರೋಟರಿ, ಮಹಿಳಾ ಮಂಡಳಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್, ಕಥಾಬಿಂದು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ, ಪುತ್ತೂರು ಸಾಹಿತ್ಯ ವೇದಿಕೆ, ಚಂದನ ಸಾಹಿತ್ಯ ವೇದಿಕೆ, ನವಚೇತನ ಸೇವಾ ಬಳಗ (ರಿ). ತೋಡಾರು ಮೊದಲಾದ ಪ್ರತಿಷ್ಠಿತ ಸಂಸ್ಥೆಗಳ ಸದಸ್ಯೆ ಕೂಡ ಆಗಿದ್ದಾರೆ.

ಇವರ ಈ ಗಣನೀಯ ಸೇವೆಯನ್ನು ಗುರುತಿಸಿ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಭೀಮರಾವ್ ವಾಷ್ಟರ್ , ನಾರಾಯಣ ಕುಕ್ಕುವಳ್ಳಿ , ವೈಲೇಶ್ ಪಿ. ಕೊಡಗು, ಹಾಜಿ ಅಬೂಬಕ್ಕರ್ ಮೊದಲಾದ ಗಣ್ಯರ ಸಮ್ಮುಖದಲ್ಲಿ ” ಚಂದನ ಸಾಹಿತ್ಯ ಜ್ಯೋತಿ “ ಎಂಬ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

10 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

14 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

22 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

22 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

24 hours ago