ಜಗತ್ತಿನಲ್ಲಿಂದು ಅಶಾಂತಿ ಹಾಗೂ ತೀವ್ರವಾದ ಹೆಚ್ಚುತ್ತಿದೆ. ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ ಎಂದು ಹೇಳಿದರು. ವಿಶ್ವಕ್ಕೆ ಕಾಲಕಾಲಕ್ಕೆ ಧರ್ಮವನ್ನು ನೀಡುವ ಕೆಲಸವನ್ನು ಭಾರತ ಮಾಡಬೇಕು. ಧರ್ಮ ತತ್ವದ ವಿಚಾರ ಮಾಡದ ಹೊರತು, ವಿಶ್ವಕ್ಕೆ ಕೊಡುಗೆ ನೀಡಲು ಸಾಧ್ಯವಿಲ್ಲ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿರುವ 3 ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಹಿಂದೂ ಸಮಾಜವನ್ನು ಸಂಘಟಿಸಲು ನಿರಂತರವಾಗಿ ಶ್ರಮಿಸಬೇಕಾದ ಅಗತ್ಯವಿದೆ. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸ್ಥಾನವಿದ್ದು, ಧರ್ಮದ ಮೂಲಕ ಸಮತೋಲನದೊಂದಿಗೆ ಸಾಗಬೇಕು. ಜೀವನದಲ್ಲಿ ಸಂಯಮ, ತ್ಯಾಗ ಹಾಗೂ ಸಮತೋಲನದ ಭಾವನೆಗಳನ್ನು ಅಳವಡಿಸಿಕೊಂಡು, ಧರ್ಮ ದೃಷ್ಟಿಯನ್ನು ಜಾಗೃತಗೊಳಿಸಬೇಕು ಎಂದು ತಿಳಿಸಿದರು. ಧರ್ಮ, ಸತ್ಯತತ್ವದ ಆಧಾರದ ಮೇಲೆ ನಡೆಯುತ್ತದೆ. ಉತ್ತಮ ಚಾರಿತ್ರ್ಯ ಹೊಂದುವ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಅನಾವರಣಗೊಳಿಸಬೇಕು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…