ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |

October 10, 2024
7:49 AM

ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ  ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.

Advertisement
Advertisement

1937 ರಲ್ಲಿ ಮುಂಬೈನಲ್ಲಿ ಪ್ರಸಿದ್ಧ ಟಾಟಾ ಕುಟುಂಬದಲ್ಲಿ ಜನಿಸಿದ ರತನ್ ಟಾಟಾ ಅವರು ತಮ್ಮ 10 ನೇ ವಯಸ್ಸಿನಲ್ಲಿಯೇ ಪೋಷಕರನ್ನು ಕಳೆದುಕೊಂಡರು. ಬಳಿಕ ಅಜ್ಜಿ ನವಾಜ್‌ಭಾಯಿ ಟಾಟಾ ಅವರ ಜೊತೆಯಲ್ಲಿ ತಮ್ಮ ಬಾಲ್ಯವನ್ನು ಕಳೆದಿದ್ದರು. ಕಾರ್ನೆಲ್‌ ವಿವಿಯಿಂದ ವಾಸ್ತುಶಿಲ್ಪ ಪದವಿ ಪಡೆದಿದ್ದ ಅವರು, ಮುಂದೆ ಹಾರ್ವರ್ಡ್‌ ವಿವಿಯಲ್ಲಿ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಪೂರ್ಣಗೊಳಿಸಿದ್ದರು. ತಮ್ಮ ಮುತ್ತಜ್ಜ ಜಮ್ಶೆಡ್‌ಜೀ ಟಾಟಾ ಸ್ಥಾಪಿಸಿದ್ದ ಟಾಟಾ ಗ್ರೂಪ್‌ನ ಜವಾಬ್ದಾರಿಯನ್ನುರತನ್‌ ಟಾಟಾ ಅವರು 1991ರಲ್ಲಿ ವಹಿಸಿಕೊಂಡಿದ್ದರು. ಸುಮಾರು 100 ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯನ್ನು ಅವರು 2012ರವರೆಗೆ ಸಮರ್ಥವಾಗಿ ಮುನ್ನಡೆಸಿದ್ದರು. 3800 ಕೋಟಿ ರೂ. ಆಸ್ತಿಯನ್ನು ಸಮರ್ಥವಾಗಿ ನಿಭಾಯಿಸಿ, ದೇಶ ಪರವಾದ ಚಿಂತನೆಯನ್ನು ಬೆಳೆಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!
June 12, 2025
11:07 AM
by: ಮಹೇಶ್ ಪುಚ್ಚಪ್ಪಾಡಿ
ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
June 12, 2025
7:06 AM
by: The Rural Mirror ಸುದ್ದಿಜಾಲ
ಶನಿ ಬುಧರಿಂದ ನವಪಂಚಮ ರಾಜಯೋಗ
June 12, 2025
6:55 AM
by: ದ ರೂರಲ್ ಮಿರರ್.ಕಾಂ
ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group