Advertisement
MIRROR FOCUS

ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ

Share

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ ಅಕ್ಕಿ ಖರೀದಿಗೆ ಸಮ್ಮತಿಸಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48,91,000 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನಾ ಸಾಮರ್ಥ್ಯವಿದ್ದು ಕೇಂದ್ರದಿಂದ ಬೆಂಬಲ ಬೆಳೆಯೊಂದಿಗೆ ಕೇವಲ 105000 ಲಕ್ಷ  ಮೆಟ್ರಿಕ್ ಟನ್ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು.ಈ ಹಿನ್ನೆಲೆ ಕೇಂದ್ರ ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ 2024-25 ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವರು ಕಳೆದ ಡಿಸೆಂಬರ್‌ನಲ್ಲಿ ಪತ್ರದ ಮುಖೇನ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

1 hour ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

11 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

11 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

11 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

11 hours ago