Advertisement
MIRROR FOCUS

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

Share

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ. ತದನಂತರ ಇ-ಕೆವೈಸಿ ಮಾಡದ  ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುತ್ತದೆ. ಕೆಲವು ಸದಸ್ಯರು ಒಟಿಪಿ  ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ  ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.

ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಚಾಲ್ತಿ ಇರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ. ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು  ಇ-ಕೆವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ.

ಇ-ಕೆವೈಸಿ ಆಗದ ಪಡಿತರ ಪಡೆಯುತ್ತಿರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಇ-ಕೆವೈಸಿ ಡ್ರೈವ್ ನಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು. ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನೋಡಿಕೊಳ್ಳಲು ಮತ್ತು ಸ್ಪಷ್ಟೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ -1967/14445/1800 425 9339 ಗೆ ಕರೆ ಮಾಡಬಹುದು.

ಹಾಸಿಗೆ ಹಿಡಿದವರು, ಅಂಗವಿಕಲರು, ವೃದ್ಧರು, ಕುಷ್ಠರೋಗಿಗಳು ಇ-ಕೆವೈಸಿ ಮಾಡಲು ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರಿಗೆ ಮಾಹಿತಿ ಒದಗಿಸಬೇಕು. ಇ-ಕೆವೈಸಿ ಫಲಾನುಭವಿಯು ಕರ್ನಾಟಕದ ಹೊರಗಿದ್ದರೆ, ಅವರ ವಾಸ್ತವ್ಯದ ಹತ್ತಿರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ಎಪ್ರಿಲ್  30 ರ ಒಳಗೆ ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ವಿಫಲರಾದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

12 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

14 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

15 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

15 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

15 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

24 hours ago