Advertisement
MIRROR FOCUS

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

Share

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ. ತದನಂತರ ಇ-ಕೆವೈಸಿ ಮಾಡದ  ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುತ್ತದೆ. ಕೆಲವು ಸದಸ್ಯರು ಒಟಿಪಿ  ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ  ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.

ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಚಾಲ್ತಿ ಇರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ. ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು  ಇ-ಕೆವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ.

ಇ-ಕೆವೈಸಿ ಆಗದ ಪಡಿತರ ಪಡೆಯುತ್ತಿರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಇ-ಕೆವೈಸಿ ಡ್ರೈವ್ ನಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು. ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನೋಡಿಕೊಳ್ಳಲು ಮತ್ತು ಸ್ಪಷ್ಟೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ -1967/14445/1800 425 9339 ಗೆ ಕರೆ ಮಾಡಬಹುದು.

ಹಾಸಿಗೆ ಹಿಡಿದವರು, ಅಂಗವಿಕಲರು, ವೃದ್ಧರು, ಕುಷ್ಠರೋಗಿಗಳು ಇ-ಕೆವೈಸಿ ಮಾಡಲು ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರಿಗೆ ಮಾಹಿತಿ ಒದಗಿಸಬೇಕು. ಇ-ಕೆವೈಸಿ ಫಲಾನುಭವಿಯು ಕರ್ನಾಟಕದ ಹೊರಗಿದ್ದರೆ, ಅವರ ವಾಸ್ತವ್ಯದ ಹತ್ತಿರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ಎಪ್ರಿಲ್  30 ರ ಒಳಗೆ ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ವಿಫಲರಾದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

20 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago