Advertisement
MIRROR FOCUS

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

Share

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ. ತದನಂತರ ಇ-ಕೆವೈಸಿ ಮಾಡದ  ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುತ್ತದೆ. ಕೆಲವು ಸದಸ್ಯರು ಒಟಿಪಿ  ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ  ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.

Advertisement

ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಚಾಲ್ತಿ ಇರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ. ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು  ಇ-ಕೆವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ.

ಇ-ಕೆವೈಸಿ ಆಗದ ಪಡಿತರ ಪಡೆಯುತ್ತಿರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಇ-ಕೆವೈಸಿ ಡ್ರೈವ್ ನಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು. ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನೋಡಿಕೊಳ್ಳಲು ಮತ್ತು ಸ್ಪಷ್ಟೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ -1967/14445/1800 425 9339 ಗೆ ಕರೆ ಮಾಡಬಹುದು.

Advertisement

ಹಾಸಿಗೆ ಹಿಡಿದವರು, ಅಂಗವಿಕಲರು, ವೃದ್ಧರು, ಕುಷ್ಠರೋಗಿಗಳು ಇ-ಕೆವೈಸಿ ಮಾಡಲು ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರಿಗೆ ಮಾಹಿತಿ ಒದಗಿಸಬೇಕು. ಇ-ಕೆವೈಸಿ ಫಲಾನುಭವಿಯು ಕರ್ನಾಟಕದ ಹೊರಗಿದ್ದರೆ, ಅವರ ವಾಸ್ತವ್ಯದ ಹತ್ತಿರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ಎಪ್ರಿಲ್  30 ರ ಒಳಗೆ ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ವಿಫಲರಾದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

20 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

20 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago