Advertisement
MIRROR FOCUS

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

Share

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ. ತದನಂತರ ಇ-ಕೆವೈಸಿ ಮಾಡದ  ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುತ್ತದೆ. ಕೆಲವು ಸದಸ್ಯರು ಒಟಿಪಿ  ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ  ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.

ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಚಾಲ್ತಿ ಇರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ. ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು  ಇ-ಕೆವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ.

ಇ-ಕೆವೈಸಿ ಆಗದ ಪಡಿತರ ಪಡೆಯುತ್ತಿರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಇ-ಕೆವೈಸಿ ಡ್ರೈವ್ ನಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು. ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನೋಡಿಕೊಳ್ಳಲು ಮತ್ತು ಸ್ಪಷ್ಟೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ -1967/14445/1800 425 9339 ಗೆ ಕರೆ ಮಾಡಬಹುದು.

ಹಾಸಿಗೆ ಹಿಡಿದವರು, ಅಂಗವಿಕಲರು, ವೃದ್ಧರು, ಕುಷ್ಠರೋಗಿಗಳು ಇ-ಕೆವೈಸಿ ಮಾಡಲು ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರಿಗೆ ಮಾಹಿತಿ ಒದಗಿಸಬೇಕು. ಇ-ಕೆವೈಸಿ ಫಲಾನುಭವಿಯು ಕರ್ನಾಟಕದ ಹೊರಗಿದ್ದರೆ, ಅವರ ವಾಸ್ತವ್ಯದ ಹತ್ತಿರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ಎಪ್ರಿಲ್  30 ರ ಒಳಗೆ ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ವಿಫಲರಾದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

5 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

7 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

13 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

13 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

21 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

21 hours ago