ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…