ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…