ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…