Advertisement
MIRROR FOCUS

ಸೀ ಫೋಕ್ ಅವತಾರದಲ್ಲಿ ಬರಲಿದ್ದಾರೆ ರವಿ ಕಟಪಾಡಿ | ಬಡವರ ಪಾಲಿನ ದೇವತಾ ಮನುಷ್ಯ ಈ ಪಬ್ಲಿಕ್‌ ಹೀರೋ |

Share

ಜೀವನವೊಂದು ನಾಟಕ ರಂಗ, ಇಲ್ಲಿ ನಿಮಿಷಕ್ಕೊಮ್ಮೆ ವೇಷ ಬದಲಿಸಿ ಬದುಕಬೇಕಾಗುತ್ತದೆ. ಆದರೆ ಅದು ನಮ್ಮ ಜೀವನಕ್ಕೋಸ್ಕರ. ಆದ್ರೆ ಇಲ್ಲೊಬ್ರು ಬೇರಯವರ ಜೀವನಕ್ಕೆ ಬೆಳಕಾಗಲು ಬೇರೆ ಬೇರೆ ವೇಷ ತೊಟ್ಟು ತಮ್ಮ ಜೀವನವನ್ನು ನಿರ್ಗತಿಕರ ಜೀವನಕ್ಕಾಗಿ ಮುಡಿಪಾಗಿಟ್ಟಿದ್ದಾರೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ರವಿ ಕಟಪಾಡಿ Ravi Katapadi ಅವರು ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆವಿಭಿನ್ನ ವೇಷಗಳನ್ನು ತೊಡುತ್ತಾರೆ. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ವಿಭಿನ್ನ ವೇಷಭೂಷಣ ತೊಟ್ಟು ಅಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸ ದಿನ ಒಂದು ಉದ್ದೇಶ ಇಟ್ಟುಕೊಂಡು ಜನರ ಮಧ್ಯೆ ಹೋಗುತ್ತಾರೆ. ರವಿ ಹಾಕುವ ವೇಷ ಸ್ವಂತಕ್ಕಲ್ಲ, ಪರರ ಹಿತಕ್ಕಾಗಿ ಹಾಗೂ ಕಷ್ಟದ ಪರಿಹಾರಕ್ಕಾಗಿ ಆಗಿರುತ್ತದೆ.

ರವಿ ಈವರೆಗೆ ಏಳು ವಿಭಿನ್ನ ವೇಷಗಳನ್ನು ತೊಟ್ಟಿದ್ದು ಒಂದು ಕೋಟಿ ಹದಿಮೂರು ಲಕ್ಷ 70 ಸಾವಿರ ರುಪಾಯಿ ಜನರಿಂದ ಸಂಗ್ರಹಿಸಿದ್ದಾರೆ. ಒಂದು ರೂಪಾಯಿ ಸ್ವಂತ ಖರ್ಚಿಗೆ ಇಟ್ಟುಕೊಳ್ಳದ ರವಿ, ಎಲ್ಲವನ್ನೂ 113 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಈ ಬಾರಿ ಮತ್ತೊಂದು ವಿಭಿನ್ನ ವೇಷದ ಮುಂದೆ ಪ್ರತ್ಯಕ್ಷ ಆಗಲಿದ್ದಾರೆ.

ಸಮಾಜ ಸೇವೆ ಮಾಡಿ ನೊಂದವರ ಮುಖದಲ್ಲಿ ನಗು ಮೂಡಿಸಿದ ರವಿ ಮನಸ್ಸಿಗೆ ಈ ಬಾರಿ ನೋವಾಗಿದೆ. ವೇಷ ಹಾಕಿ ಸಂಗ್ರಹಿಸಿದ ಹಣದಿಂದ ಕೋಟಿ ರೂಪಾಯಿಯ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಕೆಲವರು ಕುಹಕವಾಡಿದ್ದಾರೆ. ಈ ಬಾರಿ ನಾನು ವೇಷ ಹಾಕುವುದಿಲ್ಲ ಎಂದು ರವಿ ನಿರ್ಧರಿಸಿದ್ದರು. ರವಿ ಫ್ರೆಂಡ್ಸ್ ಮೀಟಿಂಗ್ ಮಾಡಿ ಊರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸ ನಾವು ಮಾಡೋಣ ಎಂದು ಈ ಬಾರಿಯೂ ವೇಷ ಹಾಕಲು ನಿರ್ಧರಿಸಿದ್ದಾರೆ.

ನಮ್ಮ ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಮಾತು ನೀಡಿದ್ದಾರೆ. ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕಾಗಿದ್ದು, ರವಿ ತನ್ನ ಕೈಲಾದ ಸಹಾಯ ಮಾಡಲಿದ್ದಾರೆ.

Source : Agencies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

5 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

5 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

6 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

6 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

18 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago