Advertisement
MIRROR FOCUS

ಸೀ ಫೋಕ್ ಅವತಾರದಲ್ಲಿ ಬರಲಿದ್ದಾರೆ ರವಿ ಕಟಪಾಡಿ | ಬಡವರ ಪಾಲಿನ ದೇವತಾ ಮನುಷ್ಯ ಈ ಪಬ್ಲಿಕ್‌ ಹೀರೋ |

Share

ಜೀವನವೊಂದು ನಾಟಕ ರಂಗ, ಇಲ್ಲಿ ನಿಮಿಷಕ್ಕೊಮ್ಮೆ ವೇಷ ಬದಲಿಸಿ ಬದುಕಬೇಕಾಗುತ್ತದೆ. ಆದರೆ ಅದು ನಮ್ಮ ಜೀವನಕ್ಕೋಸ್ಕರ. ಆದ್ರೆ ಇಲ್ಲೊಬ್ರು ಬೇರಯವರ ಜೀವನಕ್ಕೆ ಬೆಳಕಾಗಲು ಬೇರೆ ಬೇರೆ ವೇಷ ತೊಟ್ಟು ತಮ್ಮ ಜೀವನವನ್ನು ನಿರ್ಗತಿಕರ ಜೀವನಕ್ಕಾಗಿ ಮುಡಿಪಾಗಿಟ್ಟಿದ್ದಾರೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ರವಿ ಕಟಪಾಡಿ Ravi Katapadi ಅವರು ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆವಿಭಿನ್ನ ವೇಷಗಳನ್ನು ತೊಡುತ್ತಾರೆ. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ವಿಭಿನ್ನ ವೇಷಭೂಷಣ ತೊಟ್ಟು ಅಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸ ದಿನ ಒಂದು ಉದ್ದೇಶ ಇಟ್ಟುಕೊಂಡು ಜನರ ಮಧ್ಯೆ ಹೋಗುತ್ತಾರೆ. ರವಿ ಹಾಕುವ ವೇಷ ಸ್ವಂತಕ್ಕಲ್ಲ, ಪರರ ಹಿತಕ್ಕಾಗಿ ಹಾಗೂ ಕಷ್ಟದ ಪರಿಹಾರಕ್ಕಾಗಿ ಆಗಿರುತ್ತದೆ.

ರವಿ ಈವರೆಗೆ ಏಳು ವಿಭಿನ್ನ ವೇಷಗಳನ್ನು ತೊಟ್ಟಿದ್ದು ಒಂದು ಕೋಟಿ ಹದಿಮೂರು ಲಕ್ಷ 70 ಸಾವಿರ ರುಪಾಯಿ ಜನರಿಂದ ಸಂಗ್ರಹಿಸಿದ್ದಾರೆ. ಒಂದು ರೂಪಾಯಿ ಸ್ವಂತ ಖರ್ಚಿಗೆ ಇಟ್ಟುಕೊಳ್ಳದ ರವಿ, ಎಲ್ಲವನ್ನೂ 113 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಈ ಬಾರಿ ಮತ್ತೊಂದು ವಿಭಿನ್ನ ವೇಷದ ಮುಂದೆ ಪ್ರತ್ಯಕ್ಷ ಆಗಲಿದ್ದಾರೆ.

ಸಮಾಜ ಸೇವೆ ಮಾಡಿ ನೊಂದವರ ಮುಖದಲ್ಲಿ ನಗು ಮೂಡಿಸಿದ ರವಿ ಮನಸ್ಸಿಗೆ ಈ ಬಾರಿ ನೋವಾಗಿದೆ. ವೇಷ ಹಾಕಿ ಸಂಗ್ರಹಿಸಿದ ಹಣದಿಂದ ಕೋಟಿ ರೂಪಾಯಿಯ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಕೆಲವರು ಕುಹಕವಾಡಿದ್ದಾರೆ. ಈ ಬಾರಿ ನಾನು ವೇಷ ಹಾಕುವುದಿಲ್ಲ ಎಂದು ರವಿ ನಿರ್ಧರಿಸಿದ್ದರು. ರವಿ ಫ್ರೆಂಡ್ಸ್ ಮೀಟಿಂಗ್ ಮಾಡಿ ಊರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸ ನಾವು ಮಾಡೋಣ ಎಂದು ಈ ಬಾರಿಯೂ ವೇಷ ಹಾಕಲು ನಿರ್ಧರಿಸಿದ್ದಾರೆ.

ನಮ್ಮ ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಮಾತು ನೀಡಿದ್ದಾರೆ. ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕಾಗಿದ್ದು, ರವಿ ತನ್ನ ಕೈಲಾದ ಸಹಾಯ ಮಾಡಲಿದ್ದಾರೆ.

Source : Agencies

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago