Advertisement
MIRROR FOCUS

ಸೀ ಫೋಕ್ ಅವತಾರದಲ್ಲಿ ಬರಲಿದ್ದಾರೆ ರವಿ ಕಟಪಾಡಿ | ಬಡವರ ಪಾಲಿನ ದೇವತಾ ಮನುಷ್ಯ ಈ ಪಬ್ಲಿಕ್‌ ಹೀರೋ |

Share

ಜೀವನವೊಂದು ನಾಟಕ ರಂಗ, ಇಲ್ಲಿ ನಿಮಿಷಕ್ಕೊಮ್ಮೆ ವೇಷ ಬದಲಿಸಿ ಬದುಕಬೇಕಾಗುತ್ತದೆ. ಆದರೆ ಅದು ನಮ್ಮ ಜೀವನಕ್ಕೋಸ್ಕರ. ಆದ್ರೆ ಇಲ್ಲೊಬ್ರು ಬೇರಯವರ ಜೀವನಕ್ಕೆ ಬೆಳಕಾಗಲು ಬೇರೆ ಬೇರೆ ವೇಷ ತೊಟ್ಟು ತಮ್ಮ ಜೀವನವನ್ನು ನಿರ್ಗತಿಕರ ಜೀವನಕ್ಕಾಗಿ ಮುಡಿಪಾಗಿಟ್ಟಿದ್ದಾರೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ರವಿ ಕಟಪಾಡಿ Ravi Katapadi ಅವರು ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆವಿಭಿನ್ನ ವೇಷಗಳನ್ನು ತೊಡುತ್ತಾರೆ. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ವಿಭಿನ್ನ ವೇಷಭೂಷಣ ತೊಟ್ಟು ಅಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸ ದಿನ ಒಂದು ಉದ್ದೇಶ ಇಟ್ಟುಕೊಂಡು ಜನರ ಮಧ್ಯೆ ಹೋಗುತ್ತಾರೆ. ರವಿ ಹಾಕುವ ವೇಷ ಸ್ವಂತಕ್ಕಲ್ಲ, ಪರರ ಹಿತಕ್ಕಾಗಿ ಹಾಗೂ ಕಷ್ಟದ ಪರಿಹಾರಕ್ಕಾಗಿ ಆಗಿರುತ್ತದೆ.

ರವಿ ಈವರೆಗೆ ಏಳು ವಿಭಿನ್ನ ವೇಷಗಳನ್ನು ತೊಟ್ಟಿದ್ದು ಒಂದು ಕೋಟಿ ಹದಿಮೂರು ಲಕ್ಷ 70 ಸಾವಿರ ರುಪಾಯಿ ಜನರಿಂದ ಸಂಗ್ರಹಿಸಿದ್ದಾರೆ. ಒಂದು ರೂಪಾಯಿ ಸ್ವಂತ ಖರ್ಚಿಗೆ ಇಟ್ಟುಕೊಳ್ಳದ ರವಿ, ಎಲ್ಲವನ್ನೂ 113 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಈ ಬಾರಿ ಮತ್ತೊಂದು ವಿಭಿನ್ನ ವೇಷದ ಮುಂದೆ ಪ್ರತ್ಯಕ್ಷ ಆಗಲಿದ್ದಾರೆ.

ಸಮಾಜ ಸೇವೆ ಮಾಡಿ ನೊಂದವರ ಮುಖದಲ್ಲಿ ನಗು ಮೂಡಿಸಿದ ರವಿ ಮನಸ್ಸಿಗೆ ಈ ಬಾರಿ ನೋವಾಗಿದೆ. ವೇಷ ಹಾಕಿ ಸಂಗ್ರಹಿಸಿದ ಹಣದಿಂದ ಕೋಟಿ ರೂಪಾಯಿಯ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಕೆಲವರು ಕುಹಕವಾಡಿದ್ದಾರೆ. ಈ ಬಾರಿ ನಾನು ವೇಷ ಹಾಕುವುದಿಲ್ಲ ಎಂದು ರವಿ ನಿರ್ಧರಿಸಿದ್ದರು. ರವಿ ಫ್ರೆಂಡ್ಸ್ ಮೀಟಿಂಗ್ ಮಾಡಿ ಊರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸ ನಾವು ಮಾಡೋಣ ಎಂದು ಈ ಬಾರಿಯೂ ವೇಷ ಹಾಕಲು ನಿರ್ಧರಿಸಿದ್ದಾರೆ.

ನಮ್ಮ ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಮಾತು ನೀಡಿದ್ದಾರೆ. ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕಾಗಿದ್ದು, ರವಿ ತನ್ನ ಕೈಲಾದ ಸಹಾಯ ಮಾಡಲಿದ್ದಾರೆ.

Source : Agencies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago