Advertisement
MIRROR FOCUS

ಸೀ ಫೋಕ್ ಅವತಾರದಲ್ಲಿ ಬರಲಿದ್ದಾರೆ ರವಿ ಕಟಪಾಡಿ | ಬಡವರ ಪಾಲಿನ ದೇವತಾ ಮನುಷ್ಯ ಈ ಪಬ್ಲಿಕ್‌ ಹೀರೋ |

Share

ಜೀವನವೊಂದು ನಾಟಕ ರಂಗ, ಇಲ್ಲಿ ನಿಮಿಷಕ್ಕೊಮ್ಮೆ ವೇಷ ಬದಲಿಸಿ ಬದುಕಬೇಕಾಗುತ್ತದೆ. ಆದರೆ ಅದು ನಮ್ಮ ಜೀವನಕ್ಕೋಸ್ಕರ. ಆದ್ರೆ ಇಲ್ಲೊಬ್ರು ಬೇರಯವರ ಜೀವನಕ್ಕೆ ಬೆಳಕಾಗಲು ಬೇರೆ ಬೇರೆ ವೇಷ ತೊಟ್ಟು ತಮ್ಮ ಜೀವನವನ್ನು ನಿರ್ಗತಿಕರ ಜೀವನಕ್ಕಾಗಿ ಮುಡಿಪಾಗಿಟ್ಟಿದ್ದಾರೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ರವಿ ಕಟಪಾಡಿ Ravi Katapadi ಅವರು ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆವಿಭಿನ್ನ ವೇಷಗಳನ್ನು ತೊಡುತ್ತಾರೆ. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ವಿಭಿನ್ನ ವೇಷಭೂಷಣ ತೊಟ್ಟು ಅಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸ ದಿನ ಒಂದು ಉದ್ದೇಶ ಇಟ್ಟುಕೊಂಡು ಜನರ ಮಧ್ಯೆ ಹೋಗುತ್ತಾರೆ. ರವಿ ಹಾಕುವ ವೇಷ ಸ್ವಂತಕ್ಕಲ್ಲ, ಪರರ ಹಿತಕ್ಕಾಗಿ ಹಾಗೂ ಕಷ್ಟದ ಪರಿಹಾರಕ್ಕಾಗಿ ಆಗಿರುತ್ತದೆ.

ರವಿ ಈವರೆಗೆ ಏಳು ವಿಭಿನ್ನ ವೇಷಗಳನ್ನು ತೊಟ್ಟಿದ್ದು ಒಂದು ಕೋಟಿ ಹದಿಮೂರು ಲಕ್ಷ 70 ಸಾವಿರ ರುಪಾಯಿ ಜನರಿಂದ ಸಂಗ್ರಹಿಸಿದ್ದಾರೆ. ಒಂದು ರೂಪಾಯಿ ಸ್ವಂತ ಖರ್ಚಿಗೆ ಇಟ್ಟುಕೊಳ್ಳದ ರವಿ, ಎಲ್ಲವನ್ನೂ 113 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಈ ಬಾರಿ ಮತ್ತೊಂದು ವಿಭಿನ್ನ ವೇಷದ ಮುಂದೆ ಪ್ರತ್ಯಕ್ಷ ಆಗಲಿದ್ದಾರೆ.

ಸಮಾಜ ಸೇವೆ ಮಾಡಿ ನೊಂದವರ ಮುಖದಲ್ಲಿ ನಗು ಮೂಡಿಸಿದ ರವಿ ಮನಸ್ಸಿಗೆ ಈ ಬಾರಿ ನೋವಾಗಿದೆ. ವೇಷ ಹಾಕಿ ಸಂಗ್ರಹಿಸಿದ ಹಣದಿಂದ ಕೋಟಿ ರೂಪಾಯಿಯ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಕೆಲವರು ಕುಹಕವಾಡಿದ್ದಾರೆ. ಈ ಬಾರಿ ನಾನು ವೇಷ ಹಾಕುವುದಿಲ್ಲ ಎಂದು ರವಿ ನಿರ್ಧರಿಸಿದ್ದರು. ರವಿ ಫ್ರೆಂಡ್ಸ್ ಮೀಟಿಂಗ್ ಮಾಡಿ ಊರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸ ನಾವು ಮಾಡೋಣ ಎಂದು ಈ ಬಾರಿಯೂ ವೇಷ ಹಾಕಲು ನಿರ್ಧರಿಸಿದ್ದಾರೆ.

ನಮ್ಮ ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಮಾತು ನೀಡಿದ್ದಾರೆ. ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕಾಗಿದ್ದು, ರವಿ ತನ್ನ ಕೈಲಾದ ಸಹಾಯ ಮಾಡಲಿದ್ದಾರೆ.

Source : Agencies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

9 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

9 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

1 day ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago