Advertisement
MIRROR FOCUS

ಸೀ ಫೋಕ್ ಅವತಾರದಲ್ಲಿ ಬರಲಿದ್ದಾರೆ ರವಿ ಕಟಪಾಡಿ | ಬಡವರ ಪಾಲಿನ ದೇವತಾ ಮನುಷ್ಯ ಈ ಪಬ್ಲಿಕ್‌ ಹೀರೋ |

Share

ಜೀವನವೊಂದು ನಾಟಕ ರಂಗ, ಇಲ್ಲಿ ನಿಮಿಷಕ್ಕೊಮ್ಮೆ ವೇಷ ಬದಲಿಸಿ ಬದುಕಬೇಕಾಗುತ್ತದೆ. ಆದರೆ ಅದು ನಮ್ಮ ಜೀವನಕ್ಕೋಸ್ಕರ. ಆದ್ರೆ ಇಲ್ಲೊಬ್ರು ಬೇರಯವರ ಜೀವನಕ್ಕೆ ಬೆಳಕಾಗಲು ಬೇರೆ ಬೇರೆ ವೇಷ ತೊಟ್ಟು ತಮ್ಮ ಜೀವನವನ್ನು ನಿರ್ಗತಿಕರ ಜೀವನಕ್ಕಾಗಿ ಮುಡಿಪಾಗಿಟ್ಟಿದ್ದಾರೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ರವಿ ಕಟಪಾಡಿ Ravi Katapadi ಅವರು ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆವಿಭಿನ್ನ ವೇಷಗಳನ್ನು ತೊಡುತ್ತಾರೆ. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ವಿಭಿನ್ನ ವೇಷಭೂಷಣ ತೊಟ್ಟು ಅಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸ ದಿನ ಒಂದು ಉದ್ದೇಶ ಇಟ್ಟುಕೊಂಡು ಜನರ ಮಧ್ಯೆ ಹೋಗುತ್ತಾರೆ. ರವಿ ಹಾಕುವ ವೇಷ ಸ್ವಂತಕ್ಕಲ್ಲ, ಪರರ ಹಿತಕ್ಕಾಗಿ ಹಾಗೂ ಕಷ್ಟದ ಪರಿಹಾರಕ್ಕಾಗಿ ಆಗಿರುತ್ತದೆ.

Advertisement

ರವಿ ಈವರೆಗೆ ಏಳು ವಿಭಿನ್ನ ವೇಷಗಳನ್ನು ತೊಟ್ಟಿದ್ದು ಒಂದು ಕೋಟಿ ಹದಿಮೂರು ಲಕ್ಷ 70 ಸಾವಿರ ರುಪಾಯಿ ಜನರಿಂದ ಸಂಗ್ರಹಿಸಿದ್ದಾರೆ. ಒಂದು ರೂಪಾಯಿ ಸ್ವಂತ ಖರ್ಚಿಗೆ ಇಟ್ಟುಕೊಳ್ಳದ ರವಿ, ಎಲ್ಲವನ್ನೂ 113 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಈ ಬಾರಿ ಮತ್ತೊಂದು ವಿಭಿನ್ನ ವೇಷದ ಮುಂದೆ ಪ್ರತ್ಯಕ್ಷ ಆಗಲಿದ್ದಾರೆ.

ಸಮಾಜ ಸೇವೆ ಮಾಡಿ ನೊಂದವರ ಮುಖದಲ್ಲಿ ನಗು ಮೂಡಿಸಿದ ರವಿ ಮನಸ್ಸಿಗೆ ಈ ಬಾರಿ ನೋವಾಗಿದೆ. ವೇಷ ಹಾಕಿ ಸಂಗ್ರಹಿಸಿದ ಹಣದಿಂದ ಕೋಟಿ ರೂಪಾಯಿಯ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಕೆಲವರು ಕುಹಕವಾಡಿದ್ದಾರೆ. ಈ ಬಾರಿ ನಾನು ವೇಷ ಹಾಕುವುದಿಲ್ಲ ಎಂದು ರವಿ ನಿರ್ಧರಿಸಿದ್ದರು. ರವಿ ಫ್ರೆಂಡ್ಸ್ ಮೀಟಿಂಗ್ ಮಾಡಿ ಊರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸ ನಾವು ಮಾಡೋಣ ಎಂದು ಈ ಬಾರಿಯೂ ವೇಷ ಹಾಕಲು ನಿರ್ಧರಿಸಿದ್ದಾರೆ.

Advertisement

ನಮ್ಮ ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಮಾತು ನೀಡಿದ್ದಾರೆ. ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕಾಗಿದ್ದು, ರವಿ ತನ್ನ ಕೈಲಾದ ಸಹಾಯ ಮಾಡಲಿದ್ದಾರೆ.

Source : Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

1 hour ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

2 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

8 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

3 days ago