#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

August 28, 2023
10:46 AM
ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Advertisement
Advertisement

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ
May 21, 2025
10:31 PM
by: The Rural Mirror ಸುದ್ದಿಜಾಲ
ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ
May 21, 2025
10:25 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ
May 21, 2025
10:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group