ಸುದ್ದಿಗಳು

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Advertisement
Advertisement

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

1 hour ago

ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು

ಧರ್ಮರಾಯ ಮಹಾ ಜ್ಞಾನಿ. ಯಮಧರ್ಮನ ರೂಪಿನಲ್ಲಿದ್ದ ಯಕ್ಷನ ಧರ್ಮಸೂಕ್ಷ್ಮದ ಪ್ರಶ್ನೆಗಳಿಗೆ ಧರ್ಮದ ನೆಲೆಯಲ್ಲಿ…

20 hours ago

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

2 days ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 days ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 days ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago